Breaking News
Home / ಜಿಲ್ಲೆ / ಬೆಂಗಳೂರು / ಮೊಬೈಲ್‍ನಲ್ಲಿ ಮಾತಾಡಿ ಜೇಬಲ್ಲಿ ಇಟ್ಟುಕೊಳ್ಳುವಾಗ ಬಡೀತು ಸಿಡಿಲು- ವ್ಯಕ್ತಿ ಸಾವು

ಮೊಬೈಲ್‍ನಲ್ಲಿ ಮಾತಾಡಿ ಜೇಬಲ್ಲಿ ಇಟ್ಟುಕೊಳ್ಳುವಾಗ ಬಡೀತು ಸಿಡಿಲು- ವ್ಯಕ್ತಿ ಸಾವು

Spread the love

ಬೆಂಗಳೂರು: ಅಕಾಲಿಕ ಮಳೆಯಿಂದ ಜನ ಕಂಗಾಲಾಗಿದ್ದು, ಉತ್ತರ ಕರ್ನಾಟಕ ಭಾಗದಲ್ಲಿ ವರುಣನ ಅಬ್ಬರದಿಂದ ಹಲವು ಅನಾಹುತಗಳು ಸಂಭವಿಸುತ್ತಿವೆ. ಸಿಡಿಲು ಬಡಿದು ಟಿಎಪಿಸಿಎಂಎಸ್ ಅಧ್ಯಕ್ಷ ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ನಿಡೋಣಿ ಗ್ರಾಮದ ಬಳಿ ನಡೆದಿದೆ.

ವಿಜಯಪುರ ಮಾತ್ರವಲ್ಲ ಬೆಳಗಾವಿ, ಬೀದರ್ ಸೇರಿದಂತೆ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯಾಗಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ವಿವಿಧೆಡೆ ಮಳೆರಾಯ ಅಬ್ಬರಿಸಿದ್ದು, ಅರ್ಧಗಂಟೆ ಸುರಿದ ಮಳೆಗೆ ಜನರ ಬದುಕು ಮೂರಾಬಟ್ಟೆಯಾಗಿದೆ. ತೆಲಸಂಗ ಗ್ರಾಮದಲ್ಲಿ ಸುರಿದ ಅಕಾಲಿಕ ಮಳೆಗೆ ವಾರದ ಸಂತೆಯಲ್ಲಿ ಜನ ಪರದಾಡಿದ್ದಾರೆ. ಆಲಿಕಲ್ಲು ಸಮೇತ ಮಳೆಯಾಗಿದ್ದರಿಂದ ಕಲ್ಲಂಗಡಿ ಹಾಗೂ ದ್ರಾಕ್ಷಿ ಬೆಳೆ ಹಾನಿಯಾಗಿದೆ. ರಸ್ತೆಗಳಲ್ಲಿ ನೀರು ತುಂಬಿ ಹಳ್ಳದಂತಾಗಿದ್ದು, ಜನಜೀವನ ಅಸ್ತವ್ಯಸ್ಥವಾಗಿದೆ.

ಗಡಿ ಜಿಲ್ಲೆ ಬೀದರ್ ನಲ್ಲಿ ಸಹ ವರುಣನ ಅಬ್ಬರ ಜೋರಾಗಿತ್ತು. ಬಿಸಿಲಿನ ಬೇಗೆಯಿಂದ ಬೆಂದಿದ್ದ ಜನರಿಗೆ ಮಳೆರಾಯ ತಂಪೆರೆದಿದ್ದಾನೆ. ಮಳೆರಾಯನ ಆಗಮನದಿಂದಾಗಿ ಗಡಿ ಜಿಲ್ಲೆಯ ಜನ ಫುಲ್ ಖುಷ್ ಆಗಿದ್ದಾರೆ. ಬೀದರ್, ಚಿಟ್ಟಗುಪ್ಪ, ಹುಮ್ನಬಾದ್, ಹುಲಸೂರ್ ಸೇರಿದಂತೆ ಹಲವೆಡೆ ಮಳೆಯಾಗಿದೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ