Breaking News
Home / ಜಿಲ್ಲೆ / ಬೆಂಗಳೂರು / ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಮಂಜುನಾಥ ಅಲಿಯಾಸ್ ಅಂಬಾರಿ ಮೇಲೆ ಫೈರಿಂಗ್

ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಮಂಜುನಾಥ ಅಲಿಯಾಸ್ ಅಂಬಾರಿ ಮೇಲೆ ಫೈರಿಂಗ್

Spread the love

ಬೆಂಗಳೂರು: ಕೊಲೆ ಆರೋಪಿಯ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಮಂಜುನಾಥ ಅಲಿಯಾಸ್ ಅಂಬಾರಿ ಮೇಲೆ ಫೈರಿಂಗ್ ಮಾಡಲಾಗಿದೆ.

ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇನ್ಸ್ ಪೆಕ್ಟರ್ ಕಿಶೋರ್ ಅವರು ಆರೋಪಿ ಕಾಲಿಗೆ ಗುಂಡು ಹಾರಿಸಿದ್ದು, ಆರೋಪಿ ಮಂಜುನಾಥ್ ನನ್ನು ಬಂಧಿಸಲಾಗಿದೆ.

ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ದಬಲ್ ಮರ್ಡರ್ ಪ್ರಕರಣದಲ್ಲಿ ಈತ ಆರೋಪಿಯಾಗಿದ್ದು, ಬಂಧನಕ್ಕೆ ತೆರಳಿದ್ದ ವೇಳೆ ಪೊಲೀಸರ ಮೇಲೆ ದಾಳಿ ಮಾಡಿ ಪರಾರಿಯಾಗಲು ಯತ್ನಿಸಿದ್ದಾನೆ. ಶರಣಾಗುವಂತೆ ಸೂಚಿಸಿದರೂ, ಕೇಳದಿದ್ದಾಗ ಕಾಲಿಗೆ ಗುಂಡು ಹಾರಿಸಿ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಗರದ ವಿವಿಧ ಠಾಣೆಗಳಲ್ಲಿ ಮಂಜುನಾಥನ ವಿರುದ್ಧ ಕೇಸ್ ದಾಖಲಾಗಿವೆ ಎನ್ನಲಾಗಿದೆ.


Spread the love

About Laxminews 24x7

Check Also

ದೇಶದಲ್ಲಿ ಸಂವಿಧಾನ ಬದಲಿಸಿದ್ರೆ ರಕ್ತಪಾತವಾಗುತ್ತೆ : ಸಿಎಂ

Spread the loveಬೆಂಗಳೂರು : ಜೆಪಿಯವರು ಸಂವಿಧಾನ ಬದಲಾವಣೆ ಮಾಡುವ ಒಳಸಂಚು ರೂಪಿಸಿದ್ದಾರೆ. ಆದರೆ ದೇಶದಲ್ಲಿ ಸಂವಿಧಾನ ಬದಲಿಸಿದ್ರೆ ರಕ್ತಪಾತವಾಗುತ್ತದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ