Breaking News

ಒಂದು ತಿಂಗಳ ಕಾಲ ಪ್ರತಿಭಟನೆ ನಡೆಸಿದರೂ ಸರಿ 6ನೇ ವೇತನ ಆಯೋಗ ಜಾರಿ ಅಸಾಧ್ಯ:B.S.Y.

Spread the love

ಬೆಂಗಳೂರು: 6ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ ಇಂದು 7ನೇ ದಿನಕ್ಕೆ ಕಾಲಿಟ್ಟಿದ್ದು, ಸಾರಿಗೆ ಸಿಬ್ಬಂದಿಗಳು ಹಾಗೂ ಸರ್ಕಾರದ ನಡುವಿನ ಶೀತಲ ಸಮರ ತಾರಕಕ್ಕೇರಿದೆ. ಮುಷ್ಕರ ನಿರತ ಸಿಬ್ಬಂದಿಗಳ ವಿರುದ್ಧ ಸಿಎಂ ಯಡಿಯೂರಪ್ಪ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಸಾರಿಗೆ ನೌಕರರೊಂದಿಗೆ ಮಾತುಕತೆಯ ಪ್ರಶ್ನೆಯೇ ಇಲ್ಲ, ಮುಷ್ಕರ ನಿರತ ಸಿಬ್ಬಂದಿಗಳ ಸಂಬಳ ನೀಡಲೂ ಸಾಧ್ಯವಿಲ್ಲ. ಒಂದು ತಿಂಗಳ ಕಾಲ ಪ್ರತಿಭಟನೆ ನಡೆಸಿದರೂ ಸರಿ 6ನೇ ವೇತನ ಆಯೋಗ ಜಾರಿ ಅಸಾಧ್ಯ ಎಂದು ಖಡಕ್ ಆಗಿ ಹೇಳಿದ್ದಾರೆ.

 

ಸಾರಿಗೆ ನೌಕರರು ಯಾರದೋ ಮಾತು ಕೇಳಿ ಹಬ್ಬದ ಸಂದರ್ಭದಲ್ಲೂ ಮುಷ್ಕರ ಮಾಡುತ್ತಿದ್ದಾರೆ. ಸರ್ಕಾರದ ಯಾವುದೇ ಮನವಿಗೂ ಒಪ್ಪುತ್ತಿಲ್ಲ. ನೌಕರರ ಈ ಧೋರಣೆ ಸರಿಯಲ್ಲ. ಮುಷ್ಕರದಿಂದ ಇಲಾಖೆ ಜೊತೆಗೆ ಸಿಬ್ಬಂದಿಗಳಿಗೇ ನಷ್ಟ. ಒಂದು ತಿಂಗಳು ಪ್ರತಿಭಟನೆ ನಡೆಸಿದರೂ ಕೂಡ ಸರ್ಕಾರ ಮಾತ್ರ ಬಗ್ಗುವ ಪ್ರಶ್ನೆ ಇಲ್ಲ ಎಂದು ಹೇಳಿದರು.


Spread the love

About Laxminews 24x7

Check Also

ಆರೋಗ್ಯ ಮತ್ತು ಫಿಟ್ನೆಸ್ ಕಡೆ ಗಮನ ಹರಿಸಿದರೆ ಜೀವನದಲ್ಲಿ ಸದಾಕಾಲ ಸಂತೋಷದಿಂದ ಇರಬಹುದು ಎಂದು ಮೈಸೂರಿನಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಹೇಳಿದರು.

Spread the loveಮೈಸೂರು: ಜೀವನದಲ್ಲಿ ಸಂಪಾದನೆ ಮುಖ್ಯ. ಅದರೆ ಜೊತೆಯಲ್ಲಿ ನೆಮ್ಮದಿಯಾಗಿರಲು ಆರೋಗ್ಯವನ್ನೂ ಸಂಪಾದಿಸಬೇಕು ಎಂದು ಬಾಲಿವುಡ್ ನಟಿ ಶಿಲ್ಪ ಶೆಟ್ಟಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ