ದಾವಣಗೆರೆ: ಇಲ್ಲಿನ ಆನಗೋಡು ಬಸ್ ನಿಲ್ದಾಣದ ಬಳಿ ಮಾಜಿ ಸಚಿವ ಯು.ಟಿ.ಖಾದರ್ ಅವರ ಕಾರಿಗೆ ಅಪಘಾತವಾಗಿದೆ.
ನಟ ಶಂಕರ್ ನಾಗ್ ಕಾರಿಗೆ ಅಪಘಾತವಾದ ಸ್ಥಳದಲ್ಲೇ ಈ ಘಟನೆ ನಡೆದಿದೆ. ಮುಂದೆ ಹೋಗುತಿದ್ದ ಕಂಟೇನರ್ಗೆ ಖಾದರ್ ಅವರ ಕಾರು ಗುದ್ದಿದೆ. ಪರಿಣಾಮ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಅಪಘಾತದಲ್ಲಿ ಮಾಜಿ ಸಚಿವರು ಅಪಾಯದಿಂದ ಪಾರಾಗಿದ್ದಾರೆ.
ಘಟನಾ ಸ್ಥಳಕ್ಕೆ ಎಸ್ಪಿ ಹನಮಂತರಾಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಬಳಿಕ ಖಾದರ್ ಅವರು ಬೆಂಗಳೂರಿಗೆ ವಾಪಸ್ಸಾದರು.
ಬೆಳಗಾವಿ ಉಪ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರಕ್ಕೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಅವಘಡ ಸಂಭವಿಸಿದೆ.