ಧಾರವಾಡ: ಕಳೆದ ಒಂದು ವಾರದಿಂದ ಸಾರಿಗೆ ನೌಕರರ ಮುಷ್ಕರ ನಡೆಯುತ್ತಿರುವ ಹಿನ್ನೆಲೆ, ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಪರೀಕ್ಷೆಗಳನ್ನ ಮುಂದೂಡಿದೆ.
ನಾಳೆಯಿಂದ ಏಪ್ರಿಲ್ 17ರವರೆಗೆ ನಡೆಯಬೇಕಿದ್ದ ಪದವಿ ಹಾಗೂ ಸ್ನಾತಕೋತ್ತರ ಪರೀಕ್ಷೆಗಳನ್ನ ಮುಂದೂಡಲಾಗಿದೆ. ಈ ಬಗ್ಗೆ ಕರ್ನಾಟಕ ವಿಶ್ವವಿದ್ಯಾಲಯ ಕುಲಪತಿ ಕೆ ಬಿ ಗುಡಸಿ ಮಾಹಿತಿ ನೀಡಿದ್ದಾರೆ.

ಸಾರಿಗೆ ಮುಷ್ಕರ ಹಿನ್ನೆಲೆ ವಿದ್ಯಾರ್ಥಿಗಳಿಗೆ ಬಸ್ ಸೌಲಭ್ಯ ಇಲ್ಲದ ಕಾರಣ ಪರೀಕ್ಷೆ ಮುಂದೂಡಿದ್ದೇವೆ. ಮುಂದೂಡಲಾದ ಪರೀಕ್ಷೆಯ ದಿನಾಂಕವನ್ನ ಮುಂದಿನ ದಿನಗಳಲ್ಲಿ ತಿಳಿಸುವುದಾಗಿ ಗುಡಸಿ ಹೇಳಿದರು.

ಕಳೆದ ನಾಲ್ಕು ದಿನಗಳ ಹಿಂದೆ ಕೂಡಾ ಇದೇ ರೀತಿ ಬಸ್ ಇಲ್ಲದ ಹಿನ್ನೆಲೆ ಕರ್ನಾಟಕ ವಿಶ್ವವಿದ್ಯಾಲಯ ಸ್ನಾತಕೋತ್ತರ ಪರೀಕ್ಷೆಗಳನ್ನ ಮುಂದೂಡಿತ್ತು. ಇದು ಎರಡನೇ ಬಾರಿ ಪರೀಕ್ಷೆ ಮುಂದೂಡಿ ಆದೇಶ ಮಾಡಲಾಗಿದೆ ಎಂದಿದ್ದಾರೆ.
Laxmi News 24×7