Breaking News

ನಾನು ಸಿ.ಎಂ. ಸ್ಥಾನದ ಆಕಾಂಕ್ಷಿ : ಶಾಸಕ ಯತ್ನಾಳ ಏ.18 ರಂದು ರಾಜ್ಯ ರಾಜಕಾರಣದ ಭವಿಷ್ಯ ಹೇಳುತ್ತೇನೆ

Spread the love

ವಿಜಯಪುರ :ನಾನು ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಾಗಿದ್ದು, ಪಕ್ಷದ ಹೈಕಮಾಂಡ್ ಬಯಸಿದಲ್ಲಿ ಅವಕಾಶ ಕಲ್ಪಿಸಿದಲ್ಲಿ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ 150 ಸ್ಥಾನ ಗೆಲ್ಲಿಸಿ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರುತ್ತೇನೆ ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ನೇರವಾಗಿ ತಾವು ಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಿರುವುದಾಗಿ ಬಹಿರಂಗವಾಗಿ ಹೊರ ಹಾಕಿದ್ದಾರೆ.

ಬುಧವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಉತ್ತರ ಕರ್ನಾಟಕದವರು ಅದರಲ್ಲೂ ವಿಜಯಪುರ ಜಿಲ್ಲೆಯವರು ಮುಖ್ಯಮಂತ್ರಿ ಸ್ಥಾನ ನಿರ್ವಹಸುವಲ್ಲಿ ಸಮರ್ಥರಿದ್ದೇವೆ. ನನ್ನ ಮೇಲೆ ಭೂ ಹಗರಣ, ಭ್ರಷ್ಟಾಚಾರದ ಆರೋಪ ಇಲ್ಲ ಎಂದು ನೇರವಾಗಿ ಮುಖ್ಯಮಂತ್ರಿ ಯಡಿಇಯೂರಪ್ಪ ಅವರ ವಿರುದ್ಧ ಮತ್ತೆ ಹರಿ ಹಾಯ್ದರು.
ನನಗೆ ಮುಖ್ಯಮಂತ್ರಿ ಅವಕಾಶ ನೀಡಿದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಂತೆ ಭ್ರಷ್ಟಾಚಾರ ಮುಕ್ತ ಆಡಳಿತ ನೀಡುತ್ತೇನೆ. ಅಲ್ಪಸಂಖ್ಯಾತ ತುಷ್ಟೀಕರಣ ಇಲ್ಲದ ಹಾಗೂ ಗೂಂಡಾ ರಾಜ್ಯವನ್ನು ಮುಕ್ತ ಮಾಡಿ ಮಾದರಿ ಸರ್ಕಾರ ನೀಡುತ್ತೇನೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಗೌರವ ತರುವ ಕೆಲಸ ಮಾಡುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

 


Spread the love

About Laxminews 24x7

Check Also

ಜನವರಿ 22ರಿಂದ ಜನವರಿ 31ರವರೆಗೆ ಜಂಟಿ ಅಧಿವೇಶನ, ನರೇಗಾ ಬಗ್ಗೆ ವಿಶೇಷ ಚರ್ಚೆ: ಸಿಎಂ

Spread the loveಬೆಂಗಳೂರು: ಜನವರಿ 22 ರಿಂದ ಜನವರಿ 31ರ ವರೆಗೆ ಜಂಟಿ ಅಧಿವೇಶನ ನಡೆಯಲಿದ್ದು, ಅಧಿವೇಶನದ ವೇಳೆ ನರೇಗಾ(MGNREGA) ಯೋಜನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ