ಬೆಳಗಾವಿ: ಲೋಕಸಭಾ ಉಪಚುನಾವಣಾ ಪ್ರಚಾರದಲ್ಲಿ ತೊಡಗಿದ್ದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಗುರುವಾರದ ಮತ್ತೆ ಜ್ವರ ಕಾಣಿಸಿಕೊಂಡಿದೆ.
ಬುಧವಾರ ಅಷ್ಟೇ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದ್ದ ಸಿಎಂ ಬಿಎಸ್ ವೈಗೆ ಜ್ವರ ಕಾಣಿಸಿಕೊಂಡಿತ್ತು. ಇಂದು ಬಿಜೆಪಿ ಅಭ್ಯರ್ಥಿ ಮಂಗಲ ಅಂಗಡಿ ಪರ ನಡೆಯುದಿದ್ದ ರೋಡ್ ಶೋ ಅರ್ಧಕ್ಕೆ ಮೊಟಕುಗೊಳಿಸಿದ ಸಿಎಂ ವಿಶ್ರಾಂತಿ ಪಡೆಯಲು ಹೋಟೆಲ್ ಗೆ ತೆರಳಿದ ಪ್ರಸಂಗ ನಡೆಯಿತು.
ಗುರುವಾರ ಬೆಳಿಗ್ಗೆ ವಿವಿದ ಮಠಾಧೀಶರನ್ನು ಭೇಟಿಯಾಗಿದ್ದ ಮುಖ್ಯಮಂತ್ರಿ ಗಳು ನಂತರ ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ರೋಡ್ ಶೋ ನಡೆಸುತ್ತಿದ್ದರು. ಸ್ವಲ್ಪ ಸಮಯದ ಬಳಿಕ ಸುಸ್ತಾದವರಂತೆ ಕಂಡು ಬಂದ ಮುಖ್ಯಮಂತ್ರಿಗಳು ರೋಡ್ ಶೋ ಕಾರ್ಯಕ್ರಮವನ್ನು ಅರ್ಧಕ್ಕೆ ಬಿಟ್ಟು ಹೋಟೆಲ್ ಗೆ ಮರಳಿದರು.