Breaking News

ಮದುವೆ ಸಮಾರಂಭಗಳಲ್ಲಿ ನೂರು ಜನ ಮೀರಬಾರದು: ಸಚಿವ ಸುಧಾಕರ್

Spread the love

ಬೆಂಗಳೂರು: ಕೋವಿಡ್ 19 ಸೋಂಕು ನಿಯಂತ್ರಣಕ್ಕಾಗಿ ಅತಿ ಹೆಚ್ಚು ಜನ ಒಂದೆಡೆ ಸೇರುವಂತಿಲ್ಲ. ಒಳಾಂಗಣ ಮದುವೆ ಸಮಾರಂಭಕ್ಕೆ ನೂರು ಜನ ಮತ್ತು ಹೊರಾಂಗಣ ಮದುವೆ ಸಮಾರಂಭಕ್ಕೆ ಇನ್ನೂರು ಜನರಿಗಿಂತ ಹೆಚ್ಚು ಮಂದಿ ಸೇರಬಾರದು ಎಂದು ಸಚಿವ ಕೆ.ಸುಧಾಕರ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಮೈಕ್ರೋ ಕಂಟೋನ್ಮೆಂಟ್ ಹೆಚ್ಚಳ ಮಾಡುತ್ತೇವೆ ಎಂದರು.

 

ಎರಡನೇ ಅಲೆಯಲ್ಲಿ ಶೇ.95 ರಷ್ಟು ಜನರಿಗೆ ಆಸ್ಪತ್ರೆ ಚಿಕಿತ್ಸೆ ಬೇಕಿಲ್ಲ. ಕೇವಲ ಶೇ.5ರಷ್ಟು ಜನರಿಗೆ ಮಾತ್ರ ಆಸ್ಪತ್ರೆಯಲ್ಲಿ ಚಿಕಿತ್ಸೆಯ ಅಗತ್ಯವಿದೆ. ಎಲ್ಲರೂ ಸೇರಿ ಸೋಂಕು ನಿಯಂತ್ರಣ ಮಾಡೋಣ. ಅದಷ್ಟು ಬೇಗ ಎರಡನೇ ಅಲೆ ನಾವು ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕೋವಿಡ್ ಲಸಿಕೆ ಹಾಕಿಸಿಕೊಂಡ ಮೇಲೂ ಕೆಲವರಿಗೆ ಸೋಂಕು ಬಂದಿದೆ. ಬರುವುದಿಲ್ಲವೆಂದು ನಾವು ಹೇಳಿಲ್ಲ. ಆದರೆ ಸಾವಿನ ಪ್ರಮಾಣ ಕಡಿಮೆ ಆಗಲಿದೆ. ಮುಂದೆ ಬರುವ ಮೂರನೇ ಅಲೆಯನ್ನು ಇದರಿಂದ ತಪ್ಪಿಸಿಕೊಳ್ಳಬಹುದು ಎಂದು ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಸುಧಾಕರ್ ಹೇಳಿದರು.


Spread the love

About Laxminews 24x7

Check Also

ಸಿಎಂ ಬಜೆಟ್‌ನಲ್ಲಿ ಸರ್ವಾಂಗೀಣ ಅಭಿವೃದ್ಧಿ ದೃಷ್ಟಿ: ಎಂ.ಬಿ ಪಾಟೀಲ್ ಹರ್ಷ

Spread the love ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ದಾಖಲೆಯ 17ನೇ ಬಜೆಟ್ ಸರ್ವಾಂಗೀಣ ಅಭಿವೃದ್ಧಿ ದೃಷ್ಟಿಕೋನ, ಸಾಮಾಜಿಕ ನ್ಯಾಯ ಮತ್ತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ