Breaking News

ಸ್ಯಾಂಡಲ್‍ವುಡ್ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಆರೋಗ್ಯದಲ್ಲಿ ಏರುಪೇರು

Spread the love

ಬೆಂಗಳೂರು: ಸ್ಯಾಂಡಲ್‍ವುಡ್ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಚಿಕಿತ್ಸೆ ಪಡೆದು ರೆಸ್ಟ್ ಮಾಡುತ್ತಿದ್ದಾರೆ. ಹೀಗಂತ ಸುದ್ದಿಯೊಂದು ನಿನ್ನೆ ಮಧ್ಯಾಹ್ನದಿಂದ ಹರಿದಾಡುತ್ತಲೇ ಇತ್ತು. ಇದೀಗ ಇದೇ ವಿಚಾರವಾಗಿ ಸ್ವತಃ ಕಿಚ್ಚ ಸುದೀಪ್ ಟ್ವೀಟ್ ಮಾಡಿ ಸ್ಪಷ್ಟನೆ ಕೊಟ್ಟಿದ್ದಾರೆ.

ಟ್ವೀಟ್‍ನಲ್ಲಿ ಏನಿದೆ?
ನನಗೆ ಆರೋಗ್ಯ ಸರಿಯಿಲ್ಲ. ಸದ್ಯದಲ್ಲೇ ಗುಣಮುಖನಾಗುತ್ತೇನೆ ಎಂಬ ಭರವಸೆಯಿದೆ. ಆದರೆ ವೈದ್ಯರು ಇನ್ನೂ ಕೆಲವು ದಿನಗಳ ಕಾಲ ಸಂಪೂರ್ಣ ರೆಸ್ಟ್ ಮಾಡಬೇಕೆಂದು ಹೇಳಿದ್ದಾರೆ. ಹೀಗಾಗಿ ಬಿಗ್‍ಬಾಸ್ ಕನ್ನಡ 8ನೇ ಸೀಸನ್‍ನ ಈ ವೀಕೆಂಡ್‍ನ ಎಪಿಸೋಡ್‍ನಲ್ಲಿ ನಾನು ಪಾಲ್ಗೊಳ್ಳುವುದಿಲ್ಲ ಎಂದು ಟ್ವೀಟ್ ಮೂಲಕವಾಗಿ ತಿಳಿಸಿದ್ದಾರೆ.

ಬಿಗ್ ಬಾಸ್ ಕನ್ನಡದ ಕ್ರಿಯೇಟಿವ್ ಟೀಂ ಈ ವೀಕೆಂಡ್‍ನಲ್ಲಿ ವಾರದ ಕತೆ ಕಿಚ್ಚನ ಜೊತೆ ಬದಲಾಗಿ ಯಾವ ರೀತಿಯ ವಿಭಿನ್ನವಾದ ಪ್ಲಾನ್ ಮಾಡಿಕೊಳ್ಳಲಿದೆ ಎಂಬ ಬಗ್ಗೆ ನನಗೂ ಕುತೂಹಲವಿದೆ. ಈ ವಾರದ ಎಲಿಮಿನೇಷನ್ ಪ್ರಕ್ರಿಯೆ ಹೇಗಾಗಲಿದೆ ಎಂಬುದನ್ನು ಕಾದು ನೋಡಿ ಎಂದು ಕಿಚ್ಚ ಸುದೀಪ್ ಟ್ವೀಟ್ ಮಾಡಿ ತಿಳಿಸಿದ್ದಾರೆ.

ಕಿಚ್ಚ ಸುದೀಪ್ ಅನಾರೋಗ್ಯಕ್ಕೀಡಾಗಿದ್ದಾರೆ ಎಂಬ ಸುದ್ದಿ ತಿಳಿದ ಕೂಡಲೇ ಅಭಿಮಾನಿಗಳು ಆತಂಕಗೊಂಡಿದ್ದಾರೆ. ಬೇಗ ಗುಣಮುಖರಾಗಿ ಎಂದು ಅಭಿಮಾನಿಗಳು ಕಿಚ್ಚ ಸುದೀಪ್‍ಗೆ ಹಾರೈಸುತ್ತಿದ್ದಾರೆ. ಜೊತೆಗೆ ನೀವಿಲ್ಲದೆ ಬಿಗ್ ಬಾಸ್ ಊಹಿಸಿಕೊಳ್ಳುವುದು ಕಷ್ಟ ಅಂತಲೂ ಫ್ಯಾನ್ಸ್ ಟ್ವೀಟ್ ಮಾಡುತ್ತಿದ್ದಾರೆ.

ಒಟ್ಟಾರೆಯಾಗಿ ಈ ವಾರದ ಬಿಗ್‍ಬಾಸ್ ವೀಕೆಂಡ್ ಕಾರ್ಯಕ್ರಮ ಹೇಗೆ ನಡೆಯಲಿದೆ. ಏನೆಲ್ಲಾ ಬದಲಾವಣೆಗಳು ಆಗಲಿವೆ ಎಂಬುದನ್ನು ಕಾದು ನೋಡಬೇಕಿದೆ. ಕಿಚ್ಚ ಆದಷ್ಟು ಬೇಗ ಗುಣಮುಖರಾಗಿ ಬರಲಿ ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ.


Spread the love

About Laxminews 24x7

Check Also

ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?

Spread the love ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ