Breaking News
Home / ಜಿಲ್ಲೆ / ಬೆಂಗಳೂರು / ಏಪ್ರಿಲ್ 18 ರಂದು ಸಿಎಂ ಜೊತೆ ನಡೆಯಬೇಕಿದ್ದ ಸರ್ವಪಕ್ಷ ಸಭೆ ಮುಂದೂಡಿಕೆ!

ಏಪ್ರಿಲ್ 18 ರಂದು ಸಿಎಂ ಜೊತೆ ನಡೆಯಬೇಕಿದ್ದ ಸರ್ವಪಕ್ಷ ಸಭೆ ಮುಂದೂಡಿಕೆ!

Spread the love

ಬೆಂಗಳೂರು : ಏಪ್ರಿಲ್ 18 ರಂದು ಸಿಎಂ ಯಡಿಯೂರಪ್ಪ ಕರೆದಿದ್ದ ಸರ್ವ ಪಕ್ಷ ಸಭೆಯನ್ನು ಮುಂದೂಡಿಕೆ ಮಾಡಲಾಗಿದೆ. ವಿಧಾನಸೌಧದಲ್ಲಿ ಏಪ್ರಿಲ್ 18 ಸಂಜೆ 4 ಗಂಟೆಗೆ ಸಭೆಯನ್ನು ಆಯೋಜನೆ ಮಾಡಲಾಗಿತ್ತು.

ಕೋವಿಡ್ ನಿಯಂತ್ರಣ ಸಂಬಂಧ ಎಲ್ಲಾ ಪಕ್ಷದ ಮುಖಂಡರ ಜೊತೆ ಸಲಹೆ ಪಡೆಯುವ ಉದ್ದೇಶದಿಂದ ಸಿಎಂ ಸಭೆ ಕರೆದಿದ್ದರು. ಸಭೆಯಲ್ಲಿ ಸಿದ್ದರಾಮಯ್ಯ, ಕುಮಾರಸ್ವಾಮಿ, ಡಿಕೆ ಶಿವಕುಮಾರ್ ಸೇರಿದಂತೆ ಹಲವು ಮುಖಂಡರು ಭಾಗಿಯಾಗುತ್ತಾರೆ ಎಂದು ಹೇಳಲಾಗಿತ್ತು. ಇದೀಗ ಸಭೆಯನ್ನು ದಿಢೀರ್ ಮುಂದೂಡಿಕೆ ಮಾಡಲಾಗಿದ್ದು, ಯಾವ ಕಾರಣಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂಬ ಚರ್ಚೆ ಶುರುವಾಗಿದೆ.

ಸದ್ಯ ಮುಂದಿನ ಸಭೆ ಯಾವಾಗ ನಡೆಯಲಿದೆ ಎಂದು ಹೇಳದೇ ಸರ್ವ ಪಕ್ಷ ಸಭೆಯನ್ನು ಮುಂದೂಡಿಕೆ ಮಾಡಲಾಗಿದೆ. ಇತ್ತ ಸಿಎಂ ಯಡಿಯೂರಪ್ಪ ಅವರಿಗೆ ಅನಾರೋಗ್ಯ ನಿಮಿತ್ತ ಸಭೆಯನ್ನು ಮುಂದೂಡಿಕೆ ಮಾಡಲಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ