ಹೊನ್ನಾಳಿ: ತಾಲ್ಲೂಕಿನ ಕುಂದೂರು ಗ್ರಾಮದ ಹೊರವಲಯದ ಮನೆಯೊಂದರ ಮೇಲೆ ಐದು ಜನರಿದ್ದ ದುಷ್ಕರ್ಮಿಗಳ ತಂಡ ಗುರುವಾರ ರಾತ್ರಿ ಕುಂದೂರು ಗ್ರಾಮದ ನಿವಾಸಿ, ಹೊನ್ನಾಳಿ ಪಿಕಾರ್ಡ್ ಬ್ಯಾಂಕ್ ಮಾಜಿ ಅಧ್ಯಕ್ಷ ಎಂಜಿಆರ್ ಮಂಜುನಾಥ್ ಅವರ ಮೇಲೆ ಹಲ್ಲೆ ನಡೆಸಿದೆ.
ತೀವ್ರವಾಗಿ ಗಾಯಗೊಂಡಿರುವ ಅವರನ್ನು ಹೊನ್ನಾಳಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕುಂದೂರು ಗ್ರಾಮಕ್ಕೆ ಪಿಎಸ್ಐ ಬಸನಗೌಡ ಬಿರಾದಾರ ಅವರು ಭೇಟಿ ನೀಡಿ ಪರಿಶೀಲಿಸಿದರು.
ಈ ಸಂಬಂಧ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ತಪ್ಪಿಸಿಕೊಂಡಿರುವ ಇತರ ನಾಲ್ವರ ಬಂಧನಕ್ಕೆ ಹೊನ್ನಾಳಿ ಪೊಲೀಸರು ಬಲೆ ಬೀಸಿದ್ದಾರೆ. ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Laxmi News 24×7