Breaking News
Home / ರಾಜಕೀಯ / ಕೊವಿಡ್-19 ನಿಯಂತ್ರಣಕ್ಕೆ ಹೊಸ ಅಸ್ತ್ರ; ಲಾಕ್​ಡೌನ್​ ಮಾಡುವ ಬದಲು ಈ ಯೋಜನೆಗೆ ಸಿದ್ಧವಾಗ್ತಿದೆಯಾ ಸರ್ಕಾರ?

ಕೊವಿಡ್-19 ನಿಯಂತ್ರಣಕ್ಕೆ ಹೊಸ ಅಸ್ತ್ರ; ಲಾಕ್​ಡೌನ್​ ಮಾಡುವ ಬದಲು ಈ ಯೋಜನೆಗೆ ಸಿದ್ಧವಾಗ್ತಿದೆಯಾ ಸರ್ಕಾರ?

Spread the love

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್​ ಸೋಂಕಿನ ಪ್ರಸರಣ ದಿನೇದಿನೆ ಏರಿಕೆಯಾಗುತ್ತಿದ್ದು, ಸರ್ಕಾರ ಮತ್ತೊಮ್ಮೆ ಲಾಕ್​ಡೌನ್​ ಹೇರಬಹುದಾ ಎಂಬ ಪ್ರಶ್ನೆ ಕಾಡುತ್ತಿದೆ. ನಿನ್ನೆಯಷ್ಟೇ ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆಯಾಗಿದ್ದು, ಏಪ್ರಿಲ್​ 20ರವರೆಗೆ ನೈಟ್​ ಕರ್ಫ್ಯೂ ಮುಂದುವರಿಯಲಿದೆ. ಮಂಗಳವಾರ ಇನ್ನೊಂದು ಸಭೆಯ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಸಿಎಂ ನಿನ್ನೆ ತಿಳಿಸಿದ್ದಾರೆ. ಆದರೆ ಸರ್ಕಾರ ಕೊರೊನಾವನ್ನು ಮಣಿಸಲು ಇನ್ನೊಂದು ಹೊಸ ಪ್ಲ್ಯಾನ್​ ಮಾಡಿದೆ ಎನ್ನಲಾಗಿದೆ. ನೈಟ್​ ಕರ್ಫ್ಯೂ ಸಮಯ ಬದಲಿಸಲು ಮುಂದಾಗಿದೆ.

ಬಹುತೇಕ ಕಚೇರಿಗಳು ಸಂಜೆ 6 ಗಂಟೆಗೇ ಬಂದ್​ ಆಗುವ ಹಿನ್ನೆಲೆಯಲ್ಲಿ 6ಗಂಟೆಯಿಂದಲೇ ನೈಟ್ ಕರ್ಫ್ಯೂ ಜಾರಿಗೆ ತರುವ ಬಗ್ಗೆ ಗಂಭೀರವಾಗಿ ಚರ್ಚೆ ಮಾಡಲಾಗುತ್ತಿದೆ. ಸಂಜೆ 6 ಗಂಟೆ ನಂತರ ಜನರು ಗುಂಪುಗೂಡುವುದು ಹೆಚ್ಚಾಗುತ್ತಿದೆ. ವಾಕಿಂಗ್​, ಔಟಿಂಗ್, ಶಾಪಿಂಗ್​, ಸಿನಿಮಾ.. ಚಾಟ್ಸ್​ ನೆಪದಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಮನೆಯಿಂದ ಹೊರಬೀಳುತ್ತಿದ್ದಾರೆ. ಹೀಗಾಗಿ ಸಂಜೆ 6ಗಂಟೆಯಿಂದಲೇ ನೈಟ್​ಕರ್ಫ್ಯೂ ಜಾರಿ ಮಾಡುವ ಬಗ್ಗೆ ತಜ್ಞರಿಂದ ಸಲಹೆಗಳು ವ್ಯಕ್ತವಾಗಿವೆ.

ಹಾಗೇ, ಹೋಟೆಲ್, ರೆಸ್ಟೋರೆಂಟ್​ಗಳಿಂದ ಪಾರ್ಸೆಲ್​ಗೆ ಮಾತ್ರ ಅವಕಾಶ ನೀಡಬೇಕು. ಮಾಲ್​ಗಳನ್ನು ಸಂಪೂರ್ಣವಾಗಿ ಬಂದ್​ ಮಾಡಬೇಕು. ಎಸಿ ಸಹಿತ ಮಳಿಗೆಗಳಲ್ಲಿ ಅದನ್ನು ತೆಗೆಯಬೇಕು ಎಂಬಿತ್ಯಾದಿ ಸಲಹೆಗಳನ್ನೂ ಸರ್ಕಾರಕ್ಕೆ ನೀಡಲಾಗಿದೆ.


Spread the love

About Laxminews 24x7

Check Also

ಐಸ್ ಕ್ರೀಂ ತಿಂದು ಅವಳಿ ಮಕ್ಕಳು ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಹೆತ್ತ ಕಂದಮ್ಮಗಳನ್ನೇ ವಿಷಪ್ರಾಶನ ಮಾಡಿಸಿ ಕೊಂದ ತಾಯಿ

Spread the love ಮಂಡ್ಯ: ಐಸ್ ಕ್ರೀಂ ಸೇವಿಸಿದ್ದ ಅವಳಿ ಮಕ್ಕಳಿಬ್ಬರೂ ಮೃತಪಟ್ಟಿದ್ದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಹೆತ್ತ ತಾಯಿಯೇ ವಿಷವುಣಿಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ