Breaking News
Home / ಜಿಲ್ಲೆ / ಹಾವೇರಿ / ಜುಲೈ 16ರಂದು ಪರೀಕ್ಷೆ, ವರದಿ ಬಂದಿದ್ದು ಜುಲೈ 25- ಸೋಂಕು ದೃಢವಾದ್ರೂ ಬಾರದ ಅಂಬುಲೆನ್ಸ್

ಜುಲೈ 16ರಂದು ಪರೀಕ್ಷೆ, ವರದಿ ಬಂದಿದ್ದು ಜುಲೈ 25- ಸೋಂಕು ದೃಢವಾದ್ರೂ ಬಾರದ ಅಂಬುಲೆನ್ಸ್

Spread the love

ಹಾವೇರಿ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿವೆ. ಐವತ್ತು ವರ್ಷದ ಕೊರೊನಾ ಸೋಂಕಿತನನ್ನ ಆಸ್ಪತ್ರೆಗೆ ಶಿಫ್ಟ್ ಮಾಡದೆ ನಿರ್ಲಕ್ಷ್ಯ ಮಾಡಿದ ಘಟನೆ ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಹಿರೇಮುಗದೂರು ಗ್ರಾಮದಲ್ಲಿ ನಡೆದಿದೆ.

ಜುಲೈ 16 ರಂದು ಸೋಂಕಿತರ ವ್ಯಕ್ತಿ ಜಿಲ್ಲಾಸ್ಪತ್ರೆಗೆ ತೆರಳಿ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದರು. 9 ದಿನದ ಬಳಿಕ ಜುಲೈ 25ರಂದು ವರದಿ ಬಂದಿದ್ದು, ಸೋಂಕು ತಗುಲಿರೋದು ದೃಢವಾಗಿದೆ. ಗಂಟಲು ದ್ರವದ ಮಾದರಿ ನೀಡಿದ್ದಾಗಿನಿಂದ ಸೋಂಕಿತ ಮನೆಯಲ್ಲಿಯೇ ಐಸೋಲೇಶನ್ ನಲ್ಲಿದ್ದಾರೆ. ಶನಿವಾರ ಮಧ್ಯಾಹ್ನವೇ ವರದಿ ಬಂದಿದ್ದರೂ ಸೋಂಕಿತನನ್ನು ಆಸ್ಪತ್ರೆಗೆ ಶಿಫ್ಟ್ ಮಾಡುವಲ್ಲಿ ಆರೋಗ್ಯ ಇಲಾಖೆ ನಿರ್ಲಕ್ಷ್ಯ ಮಾಡಿದೆ.ಕೆಮ್ಮು, ಜ್ವರ ಮತ್ತು ಉಸಿರಾಟದ ಸಮಸ್ಯೆಯಿಂದ ಮನೆಯ ಕೊಠಡಿಯಲ್ಲಿ ಸೋಂಕಿತ ಒದ್ದಾಡ್ತಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯದ ಬಗ್ಗೆ ಸೋಂಕಿತನ ಕುಟುಂಬಸ್ಥರ ಆಕ್ರೋಶ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಡಿ ಕೆ ಶಿವಕುಮಾರ್ ಶಾಸಕರಿಗೆ ನೀಡಿರುವ ಎಚ್ಚರಿಕೆ ಕುರಿತು ಮಾತನಾಡುವುದಿಲ್ಲ ಎಂದಿದ್ದಾರೆ.

Spread the love ಹಾವೇರಿ : ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್ ಪಕ್ಷದ ವಿಚಾರದಲ್ಲಿ, ಆಂತರಿಕ ವಿಚಾರದಲ್ಲಿ ಹೇಳಿಕೆ ನೀಡದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ