Breaking News

ಬೆಣ್ಣೆ ನಗರಿಗೆ ತಟ್ಟಿದ ಕೊರೊನಾ ಬಿಸಿ : ನಾಳೆ ನಡೆಯಬೇಕಿದ್ದ ದಾವಣಗೆರೆ ವಿವಿಯ ‘ಬಿ.ಎಡ್’ ಪರೀಕ್ಷೆ ಮುಂದೂಡಿಕೆ

Spread the love

ದಾವಣಗೆರೆ : ಬೆಣ್ಣೆ ನಗರಿ ದಾವಣಗೆರೆಗೂ ಕೊರೊನಾ ಬಿಸಿ ತಟ್ಟಿದ್ದು, ಕೊರೊನಾ ಭೀತಿ ಹಿನ್ನೆಲೆ ನಾಳೆ ನಡೆಯಬೇಕಿದ್ದ ದಾವಣಗೆರೆ ವಿವಿಯ ‘ಬಿ.ಎಡ್’ ಪರೀಕ್ಷೆ ಮುಂದೂಡಿಕೆಯಾಗಿದೆ.

ಈ ಬಗ್ಗೆ ದಾವಣಗೆರೆ ವಿಶ್ವವಿದ್ಯಾಲಯ ಪರೀಕ್ಷಾಂಗ ವಿಭಾಗದ ಕುಲಸಚಿವೆ ಡಾ ಹೆಚ್ ಎಸ್ ಅನಿತಾ ಮಾಹಿತಿ ನೀಡಿದ್ದು, ಕೊರೊನಾ ಭೀತಿ ಹಾಗೂ ಸಾರಿಗೆ ಮುಷ್ಕರದ ಹಿನ್ನೆಲೆ ನಾಳೆ ನಡೆಯಬೇಕಿದ್ದ ದಾವಣಗೆರೆ ವಿವಿಯ ‘ಬಿ.ಎಡ್’ ಪರೀಕ್ಷೆ ಮುಂದೂಡಲಾಗಿದೆ. ಅಲ್ಲದೇ ಏಪ್ರಿಲ್ 20 ರಿಂದ ಆರಂಭವಾಗಲಿರುವ ಸ್ನಾತಕೋತ್ತರ ಪರೀಕ್ಷೆಗಳನ್ನು ಕೂಡ ಮುಂದೂಡಿಕೆ ಮಾಡಲಾಗಿದೆ. ಪರೀಕ್ಷೆ ನಡೆಯುವ ದಿನಾಂಕವನ್ನು ಕೋವಿಡ್ ಪರಿಸ್ಥಿತಿ ನೋಡಿಕೊಂಡು ನಿಗದಿ ಮಾಡಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.


Spread the love

About Laxminews 24x7

Check Also

ಕಾರ್ಮಿಕ ಸಂಘಟನೆಗಳಿಂದ ಭಾರತ್ ಬಂದ್‌ಗೆ ಕರೆ – 9 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರೊಟೆಸ್ಟ್

Spread the loveಬೆಂಗಳೂರು: ದೇಶಾದ್ಯಂತ ಹಲವು ಕಾರ್ಮಿಕ ಸಂಘಟನೆಗಳು  ಇಂದು ಭಾರತ್ ಬಂದ್‌ಗೆ  ಕರೆ ಕೊಟ್ಟಿವೆ. ಕೇಂದ್ರ ಸರ್ಕಾರದ ಹೊಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ