Breaking News

ಕೊರೊನಾ ಬಗ್ಗೆ ಟಿವಿಯಲ್ಲಿ ತೋರಿಸೋದು ಸುಳ್ಳು ಅಂದುಕೊಳ್ಳಬೇಡಿ: ಸಾಧುಕೋಕಿಲ ಎಚ್ಚರಿಕೆ

Spread the love

ಕೊರೊನಾ ವೈರಸ್​ ಕಾಟಕ್ಕೆ ಲಕ್ಷಾಂತರ ಜನರು ತೊಂದರೆ ಅನುಭವಿಸುತ್ತಿದ್ದಾರೆ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವವರ ಪರಿಸ್ಥಿತಿ ಚಿಂತಾಜನಕ ಆಗಿದೆ. ಆಸ್ಪತ್ರೆಗಳಲ್ಲಿ ಬೆಡ್​ ಸಿಗದೇ ಸಾವಿರಾರು ಜನರು ಪರದಾಡುತ್ತಿದ್ದಾರೆ. ದಿನ ಕಳೆದಂತೆಲ್ಲ ಸಾವಿನ ಸಂಖ್ಯೆಯೂ ಹೆಚ್ಚುತ್ತಿದೆ. ಇಂಥ ಸಂದರ್ಭದಲ್ಲಿ ಜನರು ಹೆಚ್ಚು ಎಚ್ಚರಿಕೆಯಿಂದ ಇರಬೇಕು ಎಂದು ನಟ ಸಾಧುಕೋಕಿಲ ಹೇಳಿದ್ದಾರೆ.

ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಬಗ್ಗೆ ಸಾಧುಕೋಕಿಲ ಆತಂಕ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಅವರ ಅಣ್ಣ ಮಗನಿಗೆ ಕೊರೊನಾ ಪಾಸಿಟಿವ್​ ಆಗಿತ್ತು. ಹಾಗಾಗಿ ಇದರ ಸಮಸ್ಯೆ ಏನು ಎಂಬುದನ್ನು ಅವರು ಹತ್ತಿರದಿಂದ ಕಂಡಿದ್ದಾರೆ. ಆ ಬಗ್ಗೆ ಅವರು ಪ್ರತಿಕ್ರಿಯೆ ನೀಡಿದ್ದಾರೆ.

‘ನಮ್ಮ ಅಣ್ಣನ ಮಗನಿಗೆ ಕೊರೊನಾ ಪಾಸಿಟಿವ್ ಆಗಿತ್ತು. ಈಗ ನೆಗೆಟಿಗ್ ಆಗಿದೆ. ಆದರೂ ಅವನಿಗೆ ಉಸಿರಾಟ ತೊಂದರೆ ಆಗುತ್ತಿದೆ. ಒಬ್ಬ ಸೆಲೆಬ್ರಿಟಿಯಾಗಿ ನಾನು ಒಂದು ಆಕ್ಸಿಜನ್ ಪಡಿಯೋಕೆ ಪರದಾಡಿದ್ದೇನೆ. ದಯವಿಟ್ಟು ಎಲ್ಲರೂ ಹುಷಾರಾಗಿರಿ. ಕೊರೊನಾ ವೈರಸ್​ ಬಗ್ಗೆ ಟಿವಿಯಲ್ಲಿ ತೋರಿಸೋದು ಸುಳ್ಳು ಅಂದುಕೊಳ್ಳಬೇಡಿ. ಹಬ್ಬ ಹರಿದಿನ, ಜಾತ್ರೆ ಎಲ್ಲಾ ಬಿಟ್ಟು ಹುಷಾರಾಗಿರಿ’ ಎಂದು ಸಾಧು ಕೋಕಿಲ ಕಿವಿಮಾತು ಹೇಳಿದ್ದಾರೆ.

ಸೆಲೆಬ್ರಿಟಿಗಳ ವಲಯದಲ್ಲೂ ಕೊರೊನಾ ಹಬ್ಬುತ್ತಿದೆ. ಇತ್ತೀಚೆಗಷ್ಟೇ ‘ಕೆಮಿಸ್ಟ್ರೀ ಆಫ್​ ಕರಿಯಪ್ಪ’ ಸಿನಿಮಾದ ನಿರ್ಮಾಪಕ ಡಾ. ಡಿ.ಎಸ್​. ಮಂಜುನಾಥ್​ ನಿಧನರಾದರು. ನಟಿ ಸುನೇತ್ರಾ ಪಂಡಿತ್​ ಅವರ ಸಹೋದರಿ ಕೂಡ ಕೊರೊನಾದಿಂದ ಮೃತರಾದರು. ಈ ಎಲ್ಲಾ ಘಟನೆಗಳು ಆತಂಕ ಮೂಡಿಸುತ್ತಿವೆ. ಈ ಸಂದರ್ಭದಲ್ಲಿ ಎಲ್ಲರೂ ಎಚ್ಚರಿಕೆಯಿಂದ ಇರಬೇಕು ಎಂದು ಸಾಧುಕೋಕಿಲ ಹೇಳಿದ್ದಾರೆ.

ಕಾಲಿವುಡ್​ ನಟ ವಿವೇಕ್​ ಅವರು ಏ.17ರಂದು ನಿಧನರಾದರು. ಅವರ ಬಗ್ಗೆ ಸಾಧುಕೋಕಿಲ ಮಾತನಾಡಿದ್ದಾರೆ. ವಿವೇಕ್​ ಅವರನ್ನು ನಾನು ಅನುಸರಿಸುತ್ತಿದ್ದೆ. ಅವರಿಗೆ ಯಾವುದೇ ಕೆಟ್ಟ ಅಭ್ಯಾಸ ಇರಲಿಲ್ಲ. ತುಂಬಾ ಒಳ್ಳೆಯ ಮನುಷ್ಯರಾಗಿದ್ದರು. ಅಂಥವರಿಗೆ ಹೀಗೆ ಆಗಿದ್ದು ಬೇಸರ ಮೂಡಿಸಿದೆ’ ಎಂದು ಸಾಧುಕೋಕಿಲ ಹೇಳಿದ್ದಾರೆ. ಕೊವಿಡ್​ ಲಸಿಕೆ ಪಡೆದ ಮರುದಿನವೇ ವಿವೇಕ್​ ಅವರಿಗೆ ಹೃದಯಾಘಾತ ಆಗಿತ್ತು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೂ ಚಿಕಿತ್ಸೆ ಫಲಕಾರಿಯಾಗದೇ ಶನಿವಾರ ಕೊನೆಯುಸಿರೆಳೆದರು.


Spread the love

About Laxminews 24x7

Check Also

ತೀರ್ಥಹಳ್ಳಿಯ ಮಹಿಷಿಯ ಉತ್ತರಾದಿ ಮಠದಲ್ಲಿ ಕಳ್ಳತನ – ಕೆಲವೇ ಗಂಟೆಯಲ್ಲಿ 1 ಕೋಟಿ ಮೌಲ್ಯದ ಚಿನ್ನದ 16 ಹಲಗಾರತಿ ವಶಕ್ಕೆ

Spread the loveಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿಯ ಉತ್ತರಾದಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣವನ್ನ ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ತೀರ್ಥಹಳ್ಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ