Breaking News

ಕರ್ನಾಟಕದಲ್ಲಿ ಕರೋನ ರಣಕೇಕೆ, ವಿವಾದಕ್ಕೆ ಕಾರಣವಾಗಿದೆ ರಾಜ್ಯಪಾಲ ವಜೂಬಾಯಿ ವಾಲಾರ ಈ ನಡೆ

Spread the love

ಬೆಂಗಳೂರು: ಕರ್ನಾಟಕದಲ್ಲಿ ಕರ್ನಾಟಕದಲ್ಲಿ ಕರೋನ ರಣಕೇಕೆ ಹಾಕುತ್ತಿದ್ದು, ಈ ನಡುವೆ ರಾಜ್ಯಪಾಲ ವಜೂಬಾಯಿ ವಾಲಾ ಅವರನ್ನು ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್.ಅಶೋಕ್ ಅವರು ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ರಾಜ್ಯದ ಕರೋನಾ ಮಾಹಿತಿ ನೀಡಿದರು. ಈ ವೇಳೇ ರಾಜ್ಯಪಾಲರು ಹಾಗೂ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್.ಅಶೋಕ್ ಅವರು ಚರ್ಚೆ ನಡೆಸುತ್ತಿರುವ ವೇಳೆಯಲ್ಲಿ ಗುಜರಾತ್ ನ ಕರೋನಾ ಸ್ಥಿತಿಗತಿ ಪ್ರಸಾರವಾಗುತ್ತಿರುವ ಖಾಸಗಿ ಮಾಧ್ಯಮವೊಂದರ ವರದಿಯ ಫೋಟೋ ಈಗ ವೈರಲ್‌ ಆಗುತ್ತಿದ್ದು, ರಾಜ್ಯಪಾಲರ ವಿರುದ್ದ ಆರೋಪ ಕೇಳಿ ಬರುತ್ತಿದೆ.

ಈ ನಡುವೆ ಇಂದು ರಾಜ್ಯಪಾಲರು ಹಾಗೂ ಸಚಿವರು, ವಿ.ಪ ನಾಯಕರುಗಳ ಸಭೆ ನಡೆಯಲಿದ್ದು, ಸಭೆಯಲ್ಲಿ ರಾಜ್ಯದಲ್ಲಿ ಪ್ರಸ್ತುತ ಇರುವ ಸನ್ನಿವೇಶವನ್ನು ಚರ್ಚಿಸಿ ಯಾವ ರೀತಿಯಲ್ಲಿ ತೀರ್ಮಾನ ಕೈಗೋಳ್ಳಬೇಕು ಎನ್ನುವುದರ ಬಗ್ಗೆ ಅಂತಿಮ ತೀರ್ಮಾನವನ್ನು ಕೈಗೊಳ್ಳಲಾಗುವುದು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ