Breaking News
Home / ರಾಜ್ಯ / ಪ್ರತಿಭಟನಾನಿರತ ಸಾರಿಗೆ ನೌಕರರನ್ನ ಅಟ್ಟಾಡಿಸಿ ಹೊಡೆದ ಪೊಲೀಸರು

ಪ್ರತಿಭಟನಾನಿರತ ಸಾರಿಗೆ ನೌಕರರನ್ನ ಅಟ್ಟಾಡಿಸಿ ಹೊಡೆದ ಪೊಲೀಸರು

Spread the love

ಕೋಲಾರ: ಪ್ರತಿಭಟನಾನಿರತ ಸಾರಿಗೆ ನೌಕರರ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆ ಎದುರು ಲಾಠಿ ಚಾರ್ಜ್ ಮಾಡಲಾಗಿದೆ.

ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಸಂಗೊಂಡಹಳ್ಳಿ ಬಳಿ ಪ್ರತಿಭಟನೆ ಮಾಡುತ್ತಿದ್ದ ನೌಕರರನ್ನು ಪೊಲೀಸರು ಠಾಣೆಗೆ ಕರೆತಂದಿದ್ದರು. ಪೊಲೀಸರ ಕ್ರಮ ಖಂಡಿಸಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಮಂಗಳವಾರ ಬೆಳಗ್ಗೆ ಯತ್ನಿಸಿದ ಸಾರಿಗೆ ನೌಕರರು ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಸಿದರು.

ಕೋವಿಡ್​ ಹಿನ್ನೆಲೆಯಲ್ಲಿ ಗುಂಪು ಸೇರುವಿಕೆ, ಪ್ರತಿಭಟನೆ, ಸಭೆ, ಸಮಾರಂಭಕ್ಕೆ ಅವಕಾಶ ಇಲ್ಲ. ಇಲ್ಲಿಂದ ಹೊರಡಿ ಎಂದರೂ ನೌಕರರು ನಮ್ಮವರನ್ನು ಬಿಟ್ಟುಬಿಡಿ ಎನ್ನುತ್ತಾ ಪೊಲೀಸ್​ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಪರಿಸ್ಥಿತಿ ನಿಯಂತ್ರಿಸಲು ಪ್ರತಿಭಟನಾನಿರತ ಸಾರಿಗೆ ನೌಕರರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದರು. ಕೆಲ ಸಾರಿಗೆ ನೌಕರರನ್ನ ಅಟ್ಟಾಡಿಸಿ ಹೊಡೆದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ