Breaking News

35 ಮಂದಿ ರೈತರ ಮೇಲೆ ಎಫ್‍ಐಆರ್ ದಾಖಲು

Spread the love

ಹಾವೇರಿ: ಕೊರೊನಾ ನಿಯಮ ಉಲ್ಲಂಘಿಸಿ ಹಾವೇರಿ ಜಿಲ್ಲೆ ರಾಣೆಬೆನ್ನೂರು ನಗರದ ಇಂಡಿಯನ್ ಬ್ಯಾಂಕ್ ಮುಂದೆ ಪ್ರತಿಭಟನೆ ನಡೆಸಿದ್ದ 30 ರಿಂದ 35 ರೈತರ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ.

2019ರಲ್ಲಿ ಸಾಲಮನ್ನಾ ಯೋಜನೆಯಡಿ ಹಣ ಬಿಡುಗಡೆಯಾದ್ರೂ ರೈತರ ಖಾತೆಗೆ ಹಣ ಜಮಾ ಆಗಿಲ್ಲವೆಂದು ರೈತರು ಪ್ರತಿಭಟನೆ ಮಾಡಿದ್ದರು. ಕೊರೊನಾ ಎರಡನೇ ಅಲೆಯ ಅಬ್ಬರವಿದ್ದರೂ ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಪ್ರತಿಭಟನೆ ನಡೆಸಿದ್ದಕ್ಕೆ, ವಿಪತ್ತು ನಿರ್ವಹಣಾ ಕಾಯ್ದೆಯಡಿ ರಾಣೆಬೆನ್ನೂರು ನಗರಠಾಣೆ ಪಿಎಸ್‍ಐ ಪ್ರಭು ಕೆಳಗಿನಮನಿ ಪ್ರಕರಣ ದಾಖಲು ಮಾಡಿದ್ದಾರೆ.

ಅಧಿಕಾರಿಗಳಿಂದ ಯಾವುದೇ ಅನುಮತಿ ಪಡೆಯದೆ ಅಕ್ರಮ ಕೂಟ ಕಟ್ಟಿಕೊಂಡು ನಿನ್ನೆ ಪ್ರತಿಭಟನೆ ಮಾಡಿದ್ದಕ್ಕೆ ದೂರು ದಾಖಲು ಮಾಡಲಾಗಿದೆ. ರಾಣೇಬೆನ್ನೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


Spread the love

About Laxminews 24x7

Check Also

ಸರ್ಕಾರಿ ನೌಕರನಿಗೆ ಲಂಚ ನೀಡಲು ಪತ್ನಿಯ ಮಾಂಗಲ್ಯ ಸರ ಅಡವಿಟ್ಟ ವ್ಯಕ್ತಿ

Spread the loveಹಾವೇರಿ, ಜೂನ್​ 26: ಸರ್ಕಾರಿ ನೌಕರನಿಗೆ ಲಂಚ (bribe) ನೀಡಲು ಸಂತ್ರಸ್ತ ವ್ಯಕ್ತಿ ತಮ್ಮ ಪತ್ನಿಯ ಮಾಂಗಲ್ಯ  ಸರವನ್ನು (Mangalsutra) ಅಡವಿಟ್ಟ ಘಟನೆಯೊಂದು ಹಾವೇರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ