Breaking News

ಕುಟುಂಬಸ್ಥರೇ ಕೈಬಿಟ್ಟ ಸೋಂಕಿತನ ಮೃತದೇಹಕ್ಕೆ ಮುಸ್ಲಿಂ ಸಹೋದರರಿಂದ ಅಂತಿಮ ವಿಧಿ ವಿಧಾನ..!

Spread the love

ಕೊರೊನಾ ವೈರಸ್​​ನಿಂದ ಸಾವನ್ನಪ್ಪಿದರೆ ಮುಗೀತು. ಯಾವುದೇ ಧಾರ್ಮಿಕ ವಿಧಿ ವಿಧಾನ ಮಾಡೋದು ಹಾಗಿರಲಿ. ಮೃತ ವ್ಯಕ್ತಿಯ ಮುಖ ನೋಡೋಕೂ ಕೆಲವೊಮ್ಮೆ ಕುಟುಂಬಸ್ಥರಿಗೆ ಅವಕಾಶ ಸಿಗೋದಿಲ್ಲ. ಆದರೆ ತೆಲಂಗಾಣದಲ್ಲಿ ಇಬ್ಬರು ಮುಸ್ಲಿಂ ಸಹೋದರರು ಹಿಂದೂ ವ್ಯಕ್ತಿಯ ಮೃತದೇಹಕ್ಕೆ ಅಂತ್ಯಕ್ರಿಯೆ ನಡೆಸಿದ ಮಾನವೀಯ ಘಟನೆ ವರದಿಯಾಗಿದೆ.

ಕಟಪಲ್ಲಿ ಎಂಬ ಗ್ರಾಮದಲ್ಲಿ ಕೊರೊನಾ ವೈರಸ್​ನಿಂದ ಬಲಿಯಾದ ಹಿಂದೂ ವ್ಯಕ್ತಿಯ ಅಂತ್ಯಕ್ರಿಯೆಯನ್ನ ಮುಸ್ಲಿಂ ಸಹೋದರರು ಮಾಡಿ ಮುಗಿಸಿದ್ದಾರೆ. ಮೃತ ವ್ಯಕ್ತಿಯ ಕುಟುಂಬಸ್ಥರು ಅಂತ್ಯಕ್ರಿಯೆಯಲ್ಲಿ ಭಾಗಿಯಾಗದೇ ಇರೋದ್ರಿಂದ ಮುಸ್ಲಿಂ ಸಹೋದರರೇ ಈ ಕಾರ್ಯ ಮಾಡಿ ಮುಗಿಸಿದ್ದಾರೆ.

ಮೊಘುಲಿಯಾ ಎಂಬ ಹೆಸರಿನ ವ್ಯಕ್ತಿ ಕೆಲ ದಿನಗಳ ಹಿಂದಷ್ಟೇ ಕೊರೊನಾ ಸೋಂಕಿಗೆ ಒಳಗಾಗಿದ್ದರು. ಇವರನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದರು. ಆದರೆ ಮೊಘುಲಿಯಾ ಕುಟುಂಬಸ್ಥರು ಸೋಂಕಿತನ ಅಂತ್ಯಕ್ರಿಯೆ ಮಾಡಲು ನಿರಾಕರಿಸಿದ್ದಾರೆ.

ಕುಟುಂಬಸ್ಥರೇ ಕೈಬಿಟ್ಟ ಈ ಸಂದರ್ಭದಲ್ಲಿ ಶಫಿ ಹಾಗೂ ಅಲಿ ಸಹೋದರರು ಅಂತ್ಯಕ್ರಿಯೆಗೆ ಮುಂದಾಗಿದ್ದಾರೆ. ಮೊಘುಲಿಯಾರ ರಕ್ತ ಸಂಬಂಧಿಗಳು ಅಲ್ಲದೇ ಇದ್ದರೂ ಸಹ ಆಂಬುಲೆನ್ಸ್​ ಚಾಲಕರಾದ ಈ ಸಹೋದರರು ಮೃತದೇಹದ ಅಂತ್ಯಕ್ರಿಯೆ ಮಾಡಿ ಮುಗಿಸಿದ್ದಾರೆ. ಈ ಮಾನವೀಯ ಕಾರ್ಯದ ಮೂಲಕ ಮುಸ್ಲಿಂ ಸಹೋದರರು ಸ್ಥಳೀಯರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.


Spread the love

About Laxminews 24x7

Check Also

ಬೆಂಗಳೂರಿಂದ ತಿರುಪತಿಗೆ ಹೊರಟಿದ್ದ ಕಾರು ಅಪಘಾತ; ಅಪ್ಪ-ಅಮ್ಮ, 4 ವರ್ಷದ ಮಗು ಸ್ಥಳದಲ್ಲೇ ಸಾವು

Spread the loveಬೆಂಗಳೂರು: ನಗರದಿಂದ ತಿರುಪತಿ ವೆಂಕಟೇಶ್ವರ ಸ್ವಾಮಿ  ದರ್ಶನಕ್ಕೆ ಹೊರಟಿದ್ದ ಒಂದೇ ಕುಟುಂಬದ ಮೂವರು ಭೀಕರ ಅಪಘಾತದಲ್ಲಿ ( …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ