Breaking News
Home / ರಾಜ್ಯ / ನನ್ನ ಸಾವಿಗೆ ನಟ ರಾಜಕಾರಣಿ ನಟ, ರಾಜಕಾರಣಿ ಸೀಮನ್ ಅವರೇ ಕಾರಣ.: ನಾಗಮಂಡಲ ಸಿನಿಮಾ ಖ್ಯಾತಿಯ ನಟಿ ವಿಜಯಲಕ್ಷ್ಮಿ

ನನ್ನ ಸಾವಿಗೆ ನಟ ರಾಜಕಾರಣಿ ನಟ, ರಾಜಕಾರಣಿ ಸೀಮನ್ ಅವರೇ ಕಾರಣ.: ನಾಗಮಂಡಲ ಸಿನಿಮಾ ಖ್ಯಾತಿಯ ನಟಿ ವಿಜಯಲಕ್ಷ್ಮಿ

Spread the love

ಚೆನ್ನೈ: ನಟಿ ವಿಜಯಲಕ್ಷ್ಮಿ ಆಘಾತಕಾರಿ ಪೋಸ್ಟ್ ಮಾಡಿದ್ದು, ನನ್ನ ಸಾವಿಗೆ ನಟ ರಾಜಕಾರಣಿ ನಟ, ರಾಜಕಾರಣಿ ಸೀಮನ್ ಅವರೇ ಕಾರಣ. ನಾನು ಈಗಾಗಲೇ ಬಿಪಿ ಮಾತ್ರೆಗಳನ್ನು ತೆಗೆದುಕೊಂಡಿದ್ದೇನೆ ಎಂದು ಫೇಸ್ಬುಕ್‍ನಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದಾರೆ.

ನಾಗಮಂಡಲ ಸಿನಿಮಾ ಖ್ಯಾತಿಯ ನಟಿ ವಿಜಯಲಕ್ಷ್ಮಿ ಫೇಸ್ಬುಕ್ ವಿಡಿಯೋ ಅಪ್‍ಲೋಡ್ ಮಾಡಿ, ಆತ್ಮಹತ್ಯೆಗೆ ಯತ್ನಿಸಿರುವುದಾಗಿ ತಿಳಿಸಿದ್ದಾರೆ. ನನ್ನ ಸಾವಿಗೆ ನಟ, ನಿರ್ದೇಶಕ, ರಾಜಕಾರಣಿ ಸೀಮನ್ ಅವರೇ ಕಾರಣ ಎಂದು ವಿಜಯಲಕ್ಷ್ಮಿ ನೇರ ಆರೋಪ ಮಾಡಿದ್ದು, ಆತ್ಮಹತ್ಯೆ ಮಾಡಿಕೊಳ್ಳುವ ಉದ್ದೇಶದಿಂದ ಮಾತ್ರೆಗಳನ್ನು ನುಂಗಿರುವುದಾಗಿ ತಿಳಿಸಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ.

ವಿಡಿಯೋದಲ್ಲಿ ಮಾತನಾಡಿರುವ ಅವರು, ಕರ್ನಾಟಕದ ನನ್ನ ಅಭಿಮಾನಿಗಳಿಗೆ ಹೇಳುವುದೇನೆಂದರೆ, ನಾನು ಬಹಳ ಕಷ್ಟಪಟ್ಟಿದ್ದೇನೆ. ತಮಿಳಿನಲ್ಲಿ ಸೀಮನ್ ಅನ್ನುವ ಓರ್ವ ನಟ ನನಗೆ ಬಹಳ ಹಿಂಸೆ ನೀಡಿದ್ದಾರೆ. ನಾನು ಕರ್ನಾಟಕದಲ್ಲಿ ಹುಟ್ಟಿದ್ದೇನೆ ಎಂಬ ಒಂದೇ ಒಂದು ಕಾರಣಕ್ಕೆ ತುಂಬಾ ಕಾಟ ಕೊಟ್ಟಿದ್ದಾರೆ. ನಾನು ವೇಶ್ಯಾವೃತ್ತಿ ಮಾಡುತ್ತಿದ್ದೇನೆ ಎಂದೆಲ್ಲ ನನ್ನ ಬಗ್ಗೆ ಅಪಪ್ರಚಾರ ಮಾಡಿದ್ದಾರೆ. ಇವರು ಬದುಕುವುದಕ್ಕೆ ಬಿಡುತ್ತಿಲ್ಲ ಎಂದು ವಿಡಿಯೋದಲ್ಲಿ ಆರೋಪ ಮಾಡಿದ್ದಾರೆ ವಿಜಯಲಕ್ಷ್ಮಿ.

ನಾನೀಗ ಒಂದಷ್ಟು ಬಿಪಿ ಮಾತ್ರೆಗಳನ್ನು ನುಂಗಿದ್ದೇನೆ. ಇನ್ನು ಸ್ವಲ್ಪ ಹೊತ್ತಿಗೆ ನನ್ನ ಬಿಪಿ ಕಮ್ಮಿ ಆಗಲಿದೆ. ನನ್ನ ಸಾವಿಗೆ ಕಾರಣರಾದ ಈ ಸೀಮನ್ ಮತ್ತು ಹರಿ ನಾಡರ್ ಅವರನ್ನು ಯಾವುದೇ ಕಾರಣಕ್ಕೂ ಬಿಡಲೇಬೇಡಿ. ‘ನಾಮ್ ತಮಿಳರ್ ಕಚ್ಚಿ’ ಎಂಬ ಪಕ್ಷವನ್ನು ಸೀಮನ್ ಕಟ್ಟಿದ್ದಾನೆ. ಕನ್ನಡಿಗರಿಗೆ ಆತ ಬಹಳಷ್ಟು ಕಾಟ ಕೊಟ್ಟಿದ್ದಾನೆ. ನಾನು ಹುಟ್ಟಿದ್ದು ಕರ್ನಾಟಕದಲ್ಲಿ. ನನ್ನ ಮಾತೃಭಾಷೆ ತಮಿಳು ಅನ್ನೋದು ಎಲ್ಲರಿಗೂ ಗೊತ್ತಿದೆ. ನಾನು ಕರ್ನಾಟಕದಲ್ಲಿ ಹುಟ್ಟಿದ್ದೇನೆ ಎಂಬ ಒಂದೇ ಕಾರಣಕ್ಕೆ ನನಗೆ ತುಂಬಾ ತೊಂದರೆ ನೀಡಿದ್ದಾನೆ’ ಎಂದಿದ್ದಾರೆ ವಿಜಯಲಕ್ಷ್ಮಿ.

ಇದು ನನ್ನ ಕಡೆಯ ವಿಡಿಯೋ. ಸೀಮನ್ ತಪ್ಪಿಸಿಕೊಳ್ಳಲು ಯಾರೂ ಬಿಡಬೇಡಿ. ನಾನು ತುಂಬ ಸಮಯ ಬದುಕಬೇಕು ಎಂದು ಆಸೆ ಪಟ್ಟೆ, ಅದು ಸಾಧ್ಯವಾಗಲಿಲ್ಲ. ಸೀಮನ್ ಮತ್ತು ಹರಿ ನಾಡರ್ ನನಗೆ ತುಂಬಾ ತೊಂದರೆ ನೀಡಿದ್ದಾರೆ. ಅವರಿಗೆ ತಕ್ಕ ಶಿಕ್ಷೆ ಆಗಲಿ. ನಿಮ್ಮೆಲ್ಲರನ್ನು ನಾನು ಪ್ರೀತಿಸುತ್ತೇನೆ. ನಾನು ಇನ್ನೂ ನೆನಪಾಗಿ ಉಳಿಯಲಿದ್ದೇನೆ. ನಿಮಗೆ ಏನಾದರೂ ತೊಂದರೆ ನೀಡಿದ್ದರೆ ನನ್ನನ್ನು ಕ್ಷಮಿಸಿ. ನನ್ನ ಸಾವು ಎಲ್ಲರ ಕಣ್ಣು ತೆರೆಸಲಿ. ನಾನು ಯಾರಿಗೂ ಗುಲಾಮಳಾಗಿ ಇರುವುದಿಲ್ಲ ಎಂದು ಅವರು ವಿಡಿಯೋದ ಕೊನೆಯಲ್ಲಿ ಹೇಳಿದ್ದಾರೆ. ಸದ್ಯ ಅಸ್ವಸ್ಥರಾಗಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.


Spread the love

About Laxminews 24x7

Check Also

ವನ್ಯಜೀವಿಗಳ ದಾಹ ತೀರಿಸುವ ಕೃತಕ ನೀರಿನ ತೊಟ್ಟಿಗಳು

Spread the loveಹಾನಗಲ್: ಕಡು ಬೇಸಿಗೆ ನಾಡಿನೆಲ್ಲೆಡೆ ಕುಡಿಯುವ ನೀರಿಗೆ ಅಭಾವ ಸೃಷ್ಟಿಸಿದೆ. ಕಾಡಿನಲ್ಲಿ ವನ್ಯ ಜೀವಿಗಳು ಅನುಭವಿಸುತ್ತಿರುವ ಸಂಕಷ್ಟ ಅರಿತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ