Breaking News

I.P.L. ಸ್ಕೋರ್ ಹೇಳದಕ್ಕೆ ಗಲಾಟೆ – ಜಗಳ ಬಿಡಿಸಲು ಹೋದವನ ಮೇಲೆ ಮಾರಣಾಂತಿಕ ಹಲ್ಲೆ

Spread the love

ಧಾರವಾಡ: ಜಗಳ ಬಿಡಿಸಲು ಹೋದವರಿಗೆನೇ ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ಧಾರವಾಡ ನಗರದ ಹನುಮಂತನನಗರ ಬಡಾವಣೆಯಲ್ಲಿ ನಡೆದಿದೆ.

ರೌಡಿಶೀಟರ್ ಮಂಜುನಾಥ್ ಹಿರೇಮನಿ ಹಾಗೂ ಆತನ ಸಹೋದರರಿಂದಲೇ ಈ ಹಲ್ಲೆ ನಡೆದಿದ್ದು, ಇಟ್ಟಿಗೆಗಳಿಂದ ಹಲ್ಲೆ ಮಾಡಿ ಗಾಯಗೊಳಿಸಲಾಗಿದೆ. ಐಪಿಎಲ್ ಸ್ಕೋರ್ ವಿಚಾರದಲ್ಲಿ ಅಣ್ಣಪ್ಪ ಹಾಗೂ ಲಕ್ಷ್ಮಣ್ ಎಂಬಾತನ ನಡುವೆ ಈ ಜಗಳ ಆರಂಭವಾಗಿತ್ತು. ಅಣ್ಣಪ್ಪ ಕಳೆದ ರಾತ್ರಿ ಲಕ್ಷ್ಮಣನಿಗೆ ಐಪಿಎಲ್ ಸ್ಕೋರ್ ಕೇಳಿದ್ದಾನೆ. ಆಗ ಲಕ್ಷ್ಮಣ್ ಗೊತ್ತಿಲ್ಲ ಎಂದಿದ್ದಕ್ಕೆ ಹಲ್ಲೆ ನಡೆಸಿದ್ದಾರೆ. ಇದನ್ನ ಬಿಡಿಸಲು ಹೋಗಿದ್ದ ಮೈಲಾರಿಗೆ ಅಣ್ಣಪ್ಪ ಹಾಗೂ ಆತನ ರೌಡಿಶೀಟರ್ ಸಹೋದರ ಮಂಜುನಾಥ್ ಸೇರಿ ಇಟ್ಟಿಗೆಯಿಂದ ಹಲ್ಲೆ ನಡೆಸಿದ್ದಾರೆ.

ಸದ್ಯ ಮೈಲಾರಿ ಧಾರವಾಡ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಪಿಗಳು ಪರಾರಿಯಾಗಿದ್ದಾರೆ. ಈ ಸಂಬಂಧ ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ