Breaking News

ರೋಗ್ಯ ಕೇಂದ್ರದ ವೈದ್ಯ ಹಾಗೂ ಸಿಬ್ಬಂದಿಗೆ ಬೆದರಿಸಿ ಕೊರೊನಾ ಸೋಂಕಿತ ಗರ್ಭಿಣಿಗೆ ಹೆರಿಗೆ ಮಾಡಿಸಿರುವ ಘಟನೆ ಬೆಳಕಿಗೆ ಬಂದಿದೆ.

Spread the love

ಬೆಳಗಾವಿ/ಚಿಕ್ಕೋಡಿ: ಸಮುದಾಯ ಆರೋಗ್ಯ ಕೇಂದ್ರದ ವೈದ್ಯ ಹಾಗೂ ಸಿಬ್ಬಂದಿಗೆ ಬೆದರಿಸಿ ಕೊರೊನಾ ಸೋಂಕಿತ ಗರ್ಭಿಣಿಗೆ ಹೆರಿಗೆ ಮಾಡಿಸಿರುವ ಘಟನೆ ಬೆಳಕಿಗೆ ಬಂದಿದೆ.

ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿ ಮೂರು ದಿನಗಳ ಹಿಂದೆ ಘಟನೆ ನಡೆದಿದ್ದು, ಗರ್ಭಿಣಿ ಮಹಿಳೆಯ ಕುಟುಂಬಸ್ಥರು ಸಮುದಾಯ ಆರೋಗ್ಯ ಕೇಂದ್ರದ ಎದುರು ಗಲಾಟೆ ನಡೆಸಿ, ವೈದ್ಯರಿಗೆ ಆವಾಜ್ ಹಾಕಿ ಆರೋಗ್ಯ ಕೇಂದ್ರದಲ್ಲೇ ಹೆರಿಗೆ ಮಾಡುವಂತೆ ಮಾಡಿದ್ದಾರೆ. ಇನ್ನೂ ಸೋಂಕಿತ ಗರ್ಭಿಣಿಗೆ ಆರೋಗ್ಯ ಕೇಂದ್ರದಲ್ಲಿ ಹೆರಿಗೆ ಆಗಿದ್ದರಿಂದ ಆಸ್ಪತ್ರೆಯನ್ನು ಸೀಲ್‍ಡೌನ್ ಮಾಡಲಾಗಿದೆ.

ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದರಿಂದ ಪಟ್ಟಣದ ಆರೋಗ್ಯ ಕೇಂದ್ರಕ್ಕೆ ಆಗಮಿಸಿದ್ದರು. ಕೊವಿಡ್-19 ನಿಯಮಗಳ ಪ್ರಕಾರ ಗರ್ಭಿಣಿಯನ್ನು ಕೊರೊನಾ ಟೆಸ್ಟ್ ಗೆ ಒಳಪಡಿಸಿದಾಗ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಹಿನ್ನೆಲೆ ಗರ್ಭಿಣಿಯನ್ನ ಹೆರಿಗೆಗಾಗಿ ಬೆಳಗಾವಿ ಜಿಲ್ಲಾಸ್ಪತ್ರಗೆ ಕರೆದೊಯ್ಯಲು ಆರೋಗ್ಯ ಸಿಬ್ಬಂದಿ ಮುಂದಾಗಿದ್ದರು. ಬೆಳಗಾವಿಗೆ ರೋಗಿಯನ್ನ ಕರೆದುಕೊಂಡು ಹೋಗುವಾಗ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ವಾಹನ ತಡೆದು ಧಮ್ಕಿ ಹಾಕಿದ ಕುಟುಂಬಸ್ಥರು ಅಂಬ್ಯಲೆನ್ಸ್ ಮರಳಿ ನಿಪ್ಪಾಣಿ ಆಸ್ಪತ್ರೆಗೆ ಕರೆ ತಂದು ಜಿಲ್ಲಾಸ್ಪತ್ರೆಗೆ ಕರೆದೊಯ್ಯದಂತೆ ಆಸ್ಪತ್ರೆ ಎದುರು ಗಲಾಟೆ ನಡೆಸಿದ್ದಾರೆ.

ಪಟ್ಟಣದ ಆರೋಗ್ಯ ಕೇಂದ್ರದಲ್ಲಿಯೇ ಹೆರಿಗೆ ಮಾಡಿಸುವಂತೆ ಆರೋಗ್ಯ ಸಿಬ್ಬಂದಿ ಹಾಗೂ ವೈದ್ಯರಿಗೆ ಆವಾಜ್ ಹಾಕಿದ್ದಾರೆ. ವೈದ್ಯರು ಕೂಡ ಕುಟುಂಬಸ್ಥರ ಗಲಾಟೆ ಹಾಗೂ ಒತ್ತಾಯದಿಂದ ಸಮುದಾಯ ಆರೋಗ್ಯ ಕೇಂದ್ರದಲ್ಲೇ ಸೋಂಕಿತೆಗೆ ಹೆರಿಗೆ ಮಾಡಿದ್ದಾರೆ. ಸದ್ಯ ಕೊರೊನಾ ಸೋಂಕಿತಗೆ ಹೆರಿಗೆ ಮಾಡಿದ್ದರಿಂದ ಆರೋಗ್ಯ ಕೇಂದ್ರವನ್ನು ಸ್ಯಾನಿಟೈಸ್ ಮಾಡಿ ಸೀಲ್‍ಡೌನ್ ಮಾಡಲಾಗಿದ್ದು, ಬಾಣಂತಿಯನ್ನ ಹೋಂ ಕ್ವಾರಂಟೈನ್ ಮಾಡಲಾಗಿದೆ.

ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿ ವಿರುದ್ಧ ಗಲಾಟೆ ಮಾಡಿ ಆವಾಜ್ ಹಾಕಿರುವ ಮಹಿಳೆ ಕುಟುಂಬಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಸಿಬ್ಬಂದಿ ಆಗ್ರಹಿಸಿದ್ದಾರೆ.


Spread the love

About Laxminews 24x7

Check Also

ದಂಡುಮಂಡಳಿ ಸಭೆ ಅರ್ಧಕ್ಕೆ ಬಿಟ್ಟು ಹೊರ ನಡೆದ ಸಂಸದ ಜಗದೀಶ್ ಶೆಟ್ಟರ್

Spread the loveಬೆಳಗಾವಿ: ಬೆಳಗಾವಿ ದಂಡುಮಂಡಳಿ ಇಂದು ನಡೆಸಿದ ಸಾಮಾನ್ಯ ಸಭೆಯಲ್ಲಿ ಬೆಳಗಾವಿ ಲೋಕಸಭಾ ಸದಸ್ಯ ಜಗದೀಶ ಶೆಟ್ಟರ್ ಇವರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ