Breaking News

ಕುಂಟು ನೆಪ ಒಡ್ಡಿ ಮನೆಯಿಂದ ಹೊರಬಂದರೆ ಬಂಧಿಸುತ್ತೇವೆ; ಬೆಂಗಳೂರು ಪೊಲೀಸ್ ಆಯುಕ್ತ ಕಮಲ್‌ ಪಂತ್

Spread the love

ಬೆಂಗಳೂರು: ಇಂದು ರಾತ್ರಿಯಿಂದ ಕರ್ಫ್ಯೂ ಇರುವ ಕಾರಣ ಕುಂಟು ನೆಪ ಹೇಳಿಕೊಂಡು ಹೊರಬಂದರೆ ಬಂಧಿಸುತ್ತೇವೆ. ಅನಗತ್ಯವಾಗಿ ವಾಹನ ರಸ್ತೆಗಿಳಿಸಿದರೆ ಪ್ರಕರಣ ದಾಖಲಿಸುತ್ತೇವೆ. ವಾರಾಂತ್ಯದ ಕರ್ಫ್ಯೂಗೆ ಬೆಂಗಳೂರಿನ ಜನತೆ ಸಹಕರಿಸಬೇಕು ಎಂದು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್‌ ಪಂತ್​ ಮನವಿಪೂರ್ವಕ ಎಚ್ಚರಿಕೆ ನೀಡಿದ್ದಾರೆ. ರಾತ್ರಿ 9ರಿಂದ ಯಾರೂ ಮನೆಯಿಂದ ಹೊರಗೆ ಬರುವಂತಿಲ್ಲ. ಸ್ವಿಗ್ಗಿ, ಜೊಮ್ಯಾಟೊ ಟಿ ಶರ್ಟ್​ಗಳು ದುರ್ಬಳಕೆಯಾಗುತ್ತಿವೆ. ಸ್ವಿಗ್ಗಿ, ಜೊಮ್ಯಾಟೊಗೆ ಸಂಬಂಧಿಸದವರು ಟಿ ಶರ್ಟ್‌ ಬಳಸಿ ಹೊರಗೆ ಬಂದರೆ ಕೂಡಲೇ ಬಂಧಿಸಲಾಗುವುದು. ಅನುಮತಿ ಪಡೆದಿರುವವರು ಕೂಡ ಅನಗತ್ಯವಾಗಿ ಓಡಾಡದಿರಿ ಎಂದು ಅವರು ಮಾಧ್ಯಮಗಳ ಮೂಲಕ ನಾಗರಿಕರಿಗೆ ತಿಳಿಸಿದರು.

ಮದುವೆಗೆ ಅನುಮತಿ ಪಡೆದವರು ರಾತ್ರಿ 9ರ ಒಳಗೆ ಕಲ್ಯಾಣ ಮಂಟಪ ಸೇರಿಕೊಳ್ಳಬೇಕು. ವೈದ್ಯಕೀಯ ತುರ್ತು ಸೇವೆಗಾಗಿ ಸಂಖ್ಯೆ 100ಕ್ಕೆ ಕರೆ ಮಾಡಬಹುದು. ತೊಂದರೆಗೀಡಾದವರಿಗೆ ಪೊಲೀಸರಿಂದ ಅವಶ್ಯವಾಗಿ ಸಹಕಾರ ಸಿಗುತ್ತದೆ. ಸಹಾಯಕ್ಕಾಗಿ ಸ್ವಯಂ ಸೇವಕರನ್ನು ನೇಮಿಸಿಕೊಳ್ಳಲಾಗಿದೆ. ಎಂದು ಅವರು ತಿಳಿಸಿದರು.

ವಾರಾಂತ್ಯದ ಕರ್ಫ್ಯೂ ಇಂದಿನಿಂದ ಆರಂಭವಾಗುವ ಕಾರಣ ತಮ್ಮ ಸ್ವಂತ ಊರುಗಳತ್ತ ಬೆಂಗಳೂರಿನಿಂದ ನೂರಾರು ಜನರು ತೆರಳುತ್ತಿದ್ದಾರೆ. ಹೀಗಾಗಿ ತುಮಕೂರು ಸೇರಿದಂತೆ ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಿಗೆ ತೆರಳುವ ನೆಲಮಂಗಲ ಬಳಿಯ ನವಯುಗ ಟೋಲ್​​ ಬಳಿ ವಾಹನ ದಟ್ಟಣೆ ಉಂಟಾಗಿದೆ.


Spread the love

About Laxminews 24x7

Check Also

ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?

Spread the love ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ