Breaking News
Home / ರಾಜ್ಯ / ವಿದ್ಯಾರ್ಥಿಗಳನ್ನ ಹೊರಹಾಕಿದ ಹಾಸ್ಟೆಲ್; ಅನ್ನ-ನೀರಿಗಾಗಿ​ ವಿವಿ ಸ್ಟೂಡೆಂಟ್ಸ್ ಪರದಾಟ

ವಿದ್ಯಾರ್ಥಿಗಳನ್ನ ಹೊರಹಾಕಿದ ಹಾಸ್ಟೆಲ್; ಅನ್ನ-ನೀರಿಗಾಗಿ​ ವಿವಿ ಸ್ಟೂಡೆಂಟ್ಸ್ ಪರದಾಟ

Spread the love

ಚಿತ್ರದುರ್ಗ: ಸಮಾಜ ಕಲ್ಯಾಣ ಇಲಾಖೆಯ ಯಡವಟ್ಟಿನಿಂದಾಗಿ ಹಾಸ್ಟೆಲ್​ನಲ್ಲಿರುವ ವಿದ್ಯಾರ್ಥಿಗಳು ಕಳೆದೆರಡು ದಿನಗಳಿಂದ ಅನ್ನ ನೀರಿಗಾಗಿ ಪರದಾಡುತ್ತಿರುವ ಘಟನೆ ಚಿತ್ರದುರ್ಗ ನಗರದ ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್​ನಲ್ಲಿ ನಡೆದಿದೆ.

ಕೊರೊನಾ ಕಾರಣ ಹೇಳಿ ಆರೋಗ್ಯ ಇಲಾಖೆ ಏಕಾ ಏಕಿ ಹಾಸ್ಟೆಲ್​ ಬಂದ್​ ಮಾಡಿದ್ದು.. ಹಾಸ್ಟೆಲ್​ ಸಿಬ್ಬಂದಿ ವಿದ್ಯಾರ್ಥಿಗಳ ಬಟ್ಟೆ ಲಗೇಜನ್ನು ಹೊರಹಾಕಿದ್ದಾರೆ ಎನ್ನಲಾಗಿದೆ. ಇದರಿಂದಾಗಿ ದಾವಣಗೆರೆ ವಿಶ್ವವಿದ್ಯಾನಿಲಯದ ಬಿ. ಎಡ್​ ಎಕ್ಸಾಮ್​ ಹಿನ್ನಲೆ ಹಾಸ್ಟೆಲ್​ನಲ್ಲಿ ಪರೀಕ್ಷಾ ಸಿದ್ಧತೆ ನಡೆಸಿಕೊಂಡಿದ್ದ ವಿದ್ಯಾರ್ಥಿಗಳಿಗೆ ಸಂಕಷ್ಟ ಎದುರಾಗಿದೆ. ಹಾಸ್ಟೆಲ್​ ಹೊರಗಡೆ ಲಗೇಜ್​ ಹಿಡಿದುನಿಂತ ವಿದ್ಯಾರ್ಥಿಗಳು ಪರೀಕ್ಷೆ ಮುಂದೂಡಿ, ಇಲ್ಲವೇ ಹಾಸ್ಟೆಲ್​ ವ್ಯವಸ್ಥೆ ಮಾಡಿ ಎಂದು ಆಗ್ರಹಿಸುತ್ತಿದ್ದಾರೆ. ಊಟ ಕೊಡಿ ಎಂದು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡುತ್ತಿದ್ದಾರೆ.


Spread the love

About Laxminews 24x7

Check Also

ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

Spread the love ಚಿತ್ರದುರ್ಗ: ಸಚಿವ ಜಮೀರ್ ಅಹಮದ್ ಖಾನ್ ಆರೋಗ್ಯದಲ್ಲಿ ಧಿಡೀರ್ ಏರುಪೇರಾದ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ