Breaking News

ಕೊರೊನಾ ನಿಯಮ ಪಾಲನೆಗೆ ಒಂಟೆ ಏರಿ ವಿನೂತನ ಜಾಗೃತಿ ಕಾರ್ಯಕ್ರಮ

Spread the love

ಬೆಳಗಾವಿ: ಕೊರೊನಾ ಎರಡನೇ ಅಲೆ ರಾಜ್ಯದಾದ್ಯಂತ ತೀವ್ರವಾಗಿದ್ದು, ರಾಜ್ಯ ಸರ್ಕಾರ ಸೋಂಕಿನ ನಿಯಂತ್ರಣಕ್ಕಾಗಿ ಕಠಿಣ ನಿಯಮಗಳನ್ನು ಜಾರಿ ಮಾಡಿದೆ. ಈ ನಡುವೆ ಜನರಲ್ಲಿ ಸೋಂಕಿನ ಕುರಿತು ಜಾಗೃತಿ ಮೂಡಿಸುವ ಕಾರ್ಯಗಳನ್ನು ಮಾಡುತ್ತಿದ್ದಾರೆ. ಇದರಲ್ಲಿ ಒಂದು ಹೆಜ್ಜೆ ಮುಂದಿಟ್ಟಿರುವ ಬೆಳಗಾವಿ ಮಹಾನಗರ ಪಾಲಿಗೆ ಅಧಿಕಾರಿಗಳು ಒಂಟೆ ಏರಿ ವಿನೂತನ ಜಾಗೃತಿ ಕಾರ್ಯಕ್ರಮ ನಡೆಸುತ್ತಿದ್ದಾರೆ.

ಮಹಾನಗರ ಪಾಲಿಕೆ ಮಾರ್ಷಲ್​​ಗಳು ನಗರದ ಬೀದಿಗಳಲ್ಲಿ ಒಂಟಿ ಏರಿ ಸಂಚರಿಸುವ ಮೂಲಕ ಸಾರ್ವಜನಿಕರಿಗೆ ಮನವಿ ಮಾಡುತ್ತಿದ್ದು, ಕೊರೊನಾ ನಿಯಮ ಪಾಲನೆ ಮಾಡಿ, ಪ್ರಾಣ ಕಾಪಾಡಿ. ತಪ್ಪದೇ ಮಾಸ್ಕ್​​ ಧರಿಸಿ ಸಂಚಾರ ಮಾಡಿ, ಸಾಮಾಜಿಕ ಅಂತರ ಪಾಲನೆ ಮಾಡಿ ಎಂದು ಮೈಕ್​ ಹಿಡಿದು ಮಾಹಿತಿ ನೀಡುತ್ತಿದ್ದಾರೆ. ಪಾಲಿಕೆ ಅಧಿಕಾರಿಗಳ ಕಾರ್ಯ ಸಾರ್ವಜನಿಕರ ಗಮನ ಸೆಳೆಯಲು ಯಶಸ್ವಿಯಾಗಿದೆ.


Spread the love

About Laxminews 24x7

Check Also

SSLC ಪರೀಕ್ಷೆ| 625 ಅಂಕದ ಬದಲು 525ಕ್ಕೆ ಇಳಿಕೆ

Spread the loveಬೆಂಗಳೂರು: ಇನ್ನು ಮುಂದೆ  ಎಸ್‌ಎಸ್‌ಎಲ್‌ಸಿ ಪರೀಕ್ಷೆ  625ರ ಬದಲಿಗೆ 525 ಅಂಕಗಳಿಗೆ ನಡೆಸಲು ಕರ್ನಾಟಕ ಸರ್ಕಾರ ಮಹತ್ವದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ