Breaking News
Home / Uncategorized / ಕೊರೊನಾ ನಿಯಮ ಪಾಲನೆಗೆ ಒಂಟೆ ಏರಿ ವಿನೂತನ ಜಾಗೃತಿ ಕಾರ್ಯಕ್ರಮ

ಕೊರೊನಾ ನಿಯಮ ಪಾಲನೆಗೆ ಒಂಟೆ ಏರಿ ವಿನೂತನ ಜಾಗೃತಿ ಕಾರ್ಯಕ್ರಮ

Spread the love

ಬೆಳಗಾವಿ: ಕೊರೊನಾ ಎರಡನೇ ಅಲೆ ರಾಜ್ಯದಾದ್ಯಂತ ತೀವ್ರವಾಗಿದ್ದು, ರಾಜ್ಯ ಸರ್ಕಾರ ಸೋಂಕಿನ ನಿಯಂತ್ರಣಕ್ಕಾಗಿ ಕಠಿಣ ನಿಯಮಗಳನ್ನು ಜಾರಿ ಮಾಡಿದೆ. ಈ ನಡುವೆ ಜನರಲ್ಲಿ ಸೋಂಕಿನ ಕುರಿತು ಜಾಗೃತಿ ಮೂಡಿಸುವ ಕಾರ್ಯಗಳನ್ನು ಮಾಡುತ್ತಿದ್ದಾರೆ. ಇದರಲ್ಲಿ ಒಂದು ಹೆಜ್ಜೆ ಮುಂದಿಟ್ಟಿರುವ ಬೆಳಗಾವಿ ಮಹಾನಗರ ಪಾಲಿಗೆ ಅಧಿಕಾರಿಗಳು ಒಂಟೆ ಏರಿ ವಿನೂತನ ಜಾಗೃತಿ ಕಾರ್ಯಕ್ರಮ ನಡೆಸುತ್ತಿದ್ದಾರೆ.

ಮಹಾನಗರ ಪಾಲಿಕೆ ಮಾರ್ಷಲ್​​ಗಳು ನಗರದ ಬೀದಿಗಳಲ್ಲಿ ಒಂಟಿ ಏರಿ ಸಂಚರಿಸುವ ಮೂಲಕ ಸಾರ್ವಜನಿಕರಿಗೆ ಮನವಿ ಮಾಡುತ್ತಿದ್ದು, ಕೊರೊನಾ ನಿಯಮ ಪಾಲನೆ ಮಾಡಿ, ಪ್ರಾಣ ಕಾಪಾಡಿ. ತಪ್ಪದೇ ಮಾಸ್ಕ್​​ ಧರಿಸಿ ಸಂಚಾರ ಮಾಡಿ, ಸಾಮಾಜಿಕ ಅಂತರ ಪಾಲನೆ ಮಾಡಿ ಎಂದು ಮೈಕ್​ ಹಿಡಿದು ಮಾಹಿತಿ ನೀಡುತ್ತಿದ್ದಾರೆ. ಪಾಲಿಕೆ ಅಧಿಕಾರಿಗಳ ಕಾರ್ಯ ಸಾರ್ವಜನಿಕರ ಗಮನ ಸೆಳೆಯಲು ಯಶಸ್ವಿಯಾಗಿದೆ.


Spread the love

About Laxminews 24x7

Check Also

ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Spread the love ಸೋಷಿಯಲ್‌ ಮೀಡಿಯಾ ಕುರಿತು ಹಲವು ನಟ-ನಟಿಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಮ್ಮ ಮಾತುಗಳನ್ನು ತಿರುಚುವ, ಥಂಬ್‌ನೈಲ್‌ ಮೂಲಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ