ಜುಲೈ 23ರಂದು ಈ ಘಟನೆ ನಡೆದಿದೆ. ರಾಜಪುರದ ಸುಖೌನಾ ಗ್ರಾಮದ ನಿವಾಸಿ ಸುಮನ್ ಕುಮಾರ್ ಗರ್ಭಿಣಿ ಪತ್ನಿಯನ್ನು ಬಕ್ಸರ್ ಸಾರ್ವಜನಿಕರ ಆಸ್ಪತ್ರೆಗೆ ದಾಖಲಿಸಿದ್ದರು. ಆದ್ರೆ ಆಸ್ಪತ್ರೆ ಸಿಬ್ಬಂದಿ ಗರ್ಭಿಣಿಯನ್ನು ದಾಖಲಿಸಿಕೊಂಡಿಲ್ಲ. ಕೊನೆಗೆ ಸುಮನ್ ಕುಮಾರ್ ಪತ್ನಿಯನ್ನು ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿದ್ದರು.

ಸುಮನ್ ಪತ್ನಿಗೆ ಹೆರಿಗೆಯ ಬಳಿಕ ಮಗುವಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿದೆ. ಖಾಸಗಿ ಆಸ್ಪತ್ರೆ ತಂದೆಯ ಹೆಗಲ ಮೇಲೆ ಆಕ್ಸಿಜನ್ ಸಿಲಿಂಡರ್ ಹೊರಿಸಿನ ಟ್ರೇಯಲ್ಲಿ ಮಗುವನ್ನು ಇರಿಸಿ ತಾಯಿಯ ಕೈಗೆ ಕೊಟ್ಟು ಹೊರಗೆ ಕಳುಹಿಸಿದ್ದಾರೆ. ಮಗುವಿಗೆ ಚಿಕಿತ್ಸೆ ಸಿಗದ ಹಿನ್ನೆಲೆಯಲ್ಲಿ ಪೋಷಕರು ಆಕ್ಸಿಜನ್ ಸಿಲಿಂಡರ್ ಹೊತ್ತು ಆಸ್ಪತ್ರೆ ತಿರುಗಾಡಿದ್ದಾರೆ. ಕೊನೆಗೆ ಸರ್ಕಾರಿ ಆಸ್ಪತ್ರೆಯಲ್ಲಿ ಮಗುವನ್ನು ದಾಖಲಿಸಿಕೊಂಡು ಚಿಕಿತ್ಸೆ ನೀಡುವಷ್ಟರಲ್ಲಿ ಕಂದಮ್ಮನ ಪ್ರಾಣಪಕ್ಷಿ ಹಾರಿತ್ತು.

ಫೋಟೋ ವೈರಲ್ ಆಗುತ್ತಿದ್ದಂತೆ ಸಾರ್ವಜನಿಕರು ಆರೋಗ್ಯ ಇಲಾಖೆಯ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ. ಘಟನೆಯ ಬಗ್ಗೆ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.