Breaking News

ರಾಜ್ಯದಲ್ಲಿ ದಿನಕ್ಕೆ 25 ಸಾವಿರಕ್ಕೂ ಹೆಚ್ಚು ಹೊಸ ಪ್ರಕರಣ ಸೋಮವಾರದಿಂದ ಇನ್ನಷ್ಟು ಕಠಿಣ ನಿರ್ಧಾರ?

Spread the love

ಬೆಂಗಳೂರು – ರಾಜ್ಯದಲ್ಲಿ, ಅದರಲ್ಲೂ ಬೆಂಗಳೂರಿನಲ್ಲಿ ಕ್ಷಣ ಕ್ಷಣಕ್ಕೂ ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ತುರ್ತು ಸಚಿವಸಂಪುಟ ಸಭೆ ಕರೆಯಲಾಗಿದೆ.

ರಾಜ್ಯದಲ್ಲಿ ದಿನಕ್ಕೆ 25 ಸಾವಿರಕ್ಕೂ ಹೆಚ್ಚು ಹೊಸ ಪ್ರಕರಣಗಳು ದೃಢಪಡುತ್ತಿದ್ದು, ನೂರಾರು ಮಂದಿ ಸಾವಿಗೀಡಾಗುತ್ತಿದ್ದಾರೆ. ಹಾಗಾಗಿ ತುರ್ತಾಗಿ ನಿಯಂತ್ರಣಕ್ಕೆ ತರಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಸಧ್ಯಕ್ಕೆ ಜನರಿಗೆ ತೊಂದರೆಯಾದರೂ ಜನರ ಜೀವ ಉಳಿಯುವುದು ಮುಖ್ಯ ಹಾಗೂ ಟಫ್ ರೂಲ್ಸ್ ಜಾರಿಗೊಳಿಸಿ. ರೂಲ್ಸ್ ಮುರಿಯುವವರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳಿ ಎಂದು ಸಿಎಂ ಆದೇಶಿಸಿದ್ದಾರೆ.

ಈಗಿನ ಎಲ್ಲ ಬೆಳವಣಿಗೆಗಳ ಕುರಿತು ಚರ್ಚಿಸಲು ಸೋಮವಾರ ಸಚಿವ ಸಂಪುಟ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಚರ್ಚಿಸಿ ಮುಂದೆ ಇನ್ನಷ್ಟು ಕಠಿಣ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ. ಜನರು ಎಚ್ಚೆತ್ತು ಸ್ವಯಂ ನಿಯಂತ್ರಣ ಹೇರದಿದ್ದರೆ ಪರಿಸ್ಥಿತಿ ಇನ್ನಷ್ಟು ಗಂಭೀರವಾಗಲಿದೆ. ಸಚಿವರು ಹಾಗೂ ಶಾಸಕರಿಗೂ ಅವರವರ ಕ್ಷೇತ್ರ, ಜಿಲ್ಲೆಗಳ ಜವಾಬ್ದಾರಿ ನೀಡುವ ಸಾಧ್ಯತೆಯೂ ಇಲ್ಲದಿಲ್ಲ.


Spread the love

About Laxminews 24x7

Check Also

ಕ್ಷಮೆ ಕೇಳಲಿ, ಇಲ್ಲವೇ ಸಾರ್ವಜನಿಕರ ಪ್ರತಿಭಟನೆ ಎದುರಿಸಬೇಕಾದೀತು: ಸಚಿವೆ ಹೆಬ್ಬಾಳ್ಕರ್

Spread the loveಬೆಂಗಳೂರು: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿಯ ವಿಧಾನ ಪರಿಷತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ