Breaking News

ಬಿಜೆಪಿ ಶಾಸಕ ಸುರೇಶ್‌ ಕರೊನಾ ಮಹಾಮಾರಿಗೆ ಬಲಿ

Spread the love

ಲಖನೌ: ಕರೊನಾ ಮಹಾಮಾರಿಯಿಂದ ಮೃತಪಡುತ್ತಿರುವವರ ಸಂಖ್ಯೆ ಕ್ಷಣಕ್ಷಣಕ್ಕೂ ಏರುತ್ತಲೇ ಸಾಗಿದೆ. ಇದೀಗ ಉತ್ತರ ಪ್ರದೇಶದ ಲಖನೌ ಪಶ್ಚಿಮ ಕ್ಷೇತ್ರದ ಶಾಸಕ ಸುರೇಶ್ ಶ್ರೀವಾತ್ಸವ್ ಅವರು ಕರೊನಾಕ್ಕೆ ಬಲಿಯಾಗಿದ್ದಾರೆ. ಇವರಿಗೆ 76 ವರ್ಷ ವಯಸ್ಸಾಗಿತ್ತು.15 ದಿನಗಳ ಹಿಂದೆ ಇವರಿಗೆ ಕರೊನಾ ಸೋಂಕು ತಗುಲಿರುವುದು ತಿಳಿದಿತ್ತು. ಪರಿಸ್ಥಿತಿ ಬಿಗಡಾಯಿಸಿದ್ದರಿಂದ ಕಳೆದ ವಾರ ವೆಂಟಿಲೇಟರ್‌ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದಾಗಿ ಆಸ್ಪತ್ರೆ ಮೂಲಗಳು ಹೇಳಿವೆ.
ಇವರ ನಿಧನಕ್ಕೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಟ್ವೀಟ್‌ ಮಾಡಿ ಇವರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಆರ್‍ಎಸ್‍ಎಸ್ ಹಿನ್ನೆಲೆಯುಳ್ಳವರಾಗಿದ್ದ ಸುರೇಶ್ ಶ್ರೀವಾತ್ಸವ್ ಅನುಭವಿ ರಾಜಕಾರಣಿ. ಸುರೇಶ್ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ದೇವರು ನೀಡಲಿ ಎಂದು ಉತ್ತರ ಪ್ರದೇಶ ಬಿಜೆಪಿ ರಾಜ್ಯಾಧ್ಯಕ್ಷ ಸ್ವತಂತ್ರ ದೇವ್ ಸಂತಾಪ ಸೂಚಿಸಿದ್ದಾರೆ.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ