Breaking News
Home / ರಾಜಕೀಯ / ರಾಜ್ಯದಲ್ಲಿ ಕೊರೋನಾ ನಿಯಂತ್ರಣ ಕುರಿತು ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲು ಸಿಎಂಗೆ ಸಲಹೆ – ಸಚಿವ ಎಂಟಿಬಿ ನಾಗರಾಜ್

ರಾಜ್ಯದಲ್ಲಿ ಕೊರೋನಾ ನಿಯಂತ್ರಣ ಕುರಿತು ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲು ಸಿಎಂಗೆ ಸಲಹೆ – ಸಚಿವ ಎಂಟಿಬಿ ನಾಗರಾಜ್

Spread the love

ಬೆಂಗಳೂರು : ರಾಜ್ಯಾಧ್ಯಂತ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವ ತುರ್ತು ಸಂದರ್ಭ ಒದಗಿ ಬಂದಿದೆ. ಇಂತಹ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಸಲಹೆ ಮಾಡಲಾಗಿದೆ. ಸಭೆಯ ಬಳಿಕ ಯಾವ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬುದನ್ನು ಪ್ರಕಟಿಸಲಿದ್ದಾರೆ ಎಂದು ಸಚಿವ ಎಂಟಿಬಿ ನಾಗರಾಜ್ ತಿಳಿಸಿದರು.

ಸಂಪುಟ ಸಭೆಯ ಬಳಿಕ ಮಾತನಾಡಿದಂತ ಸಚಿವ ಎಂ.ಟಿ.ಬಿ ನಾಗರಾಜ್ ಅವರು, ರಾಜ್ಯದಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಇದನ್ನು ನಿಯಂತ್ರಿಸಬೇಕಿದೆ. ಸೋಂಕಿನಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಕೂಡ ಕಡಿಮೆ ಮಾಡಬೇಕಿದೆ. ಈ ನಿಟ್ಟಿನಲ್ಲಿ ಕೈಗೊಳ್ಳಬಹುದಾದಂತ ಕ್ರಮಗಳ ಕುರಿತಂತೆ ಸಲಹೆ ಮಾಡಲಾಗಿದೆ. ಆ ನಿಟ್ಟಿನಲ್ಲಿ ಕೊರೋನಾ ನಿಯಂತ್ರಣ ಕುರಿತಂತೆ ಸಿಎಂ ಯಡಿಯೂರಪ್ಪ ಕಟ್ಟು ನಿಟ್ಟಿನ ನಿರ್ಧಾರವನ್ನು ಕೈಗೊಳ್ಳಲಿದ್ದಾರೆ ಎಂಬುದಾಗಿ ತಿಳಿಸಿದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ