Breaking News
Home / ರಾಜ್ಯ / ʼಲಾಕ್‌ ಡೌನ್ʼ ಭೀತಿಯಿಂದ ಬೆಂಗಳೂರು ತೊರೆಯುತ್ತಿರುವ ಜನ

ʼಲಾಕ್‌ ಡೌನ್ʼ ಭೀತಿಯಿಂದ ಬೆಂಗಳೂರು ತೊರೆಯುತ್ತಿರುವ ಜನ

Spread the love

ರಾಜ್ಯದಲ್ಲಿ ಕೊರೊನಾ ವೈರಸ್​ ತಾಂಡವವಾಡ್ತಿದೆ. ಅದರಲ್ಲೂ ವಿಶೇಷವಾಗಿ ಬೆಂಗಳೂರಿನಲ್ಲಿ ಡೆಡ್ಲಿ ವೈರಸ್​ ಕಾಟ ಮಿತಿಮೀರಿದೆ. ಸೋಂಕು ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಲಾಕ್​ಡೌನ್​ ಹೇರಿದ್ದು ರಾಜ್ಯ ರಾಜಧಾನಿಯ ಬಹುತೇಕ ಮಂದಿ ಕಳೆದ ವರ್ಷದಂತೆಯೇ ಈ ವರ್ಷವೂ ಸಹ ತವರೂರಿಗೆ ವಾಪಸ್ಸಾಗ್ತಾ ಇದ್ದಾರೆ.

ಕೊರೊನಾ ಬಂದರೆ ವೈದ್ಯಕೀಯ ಸೌಲಭ್ಯ ಸಿಗದೇ ಹೋದರೆ ಎನ್ನುವ ಭಯ, ಲಾಕ್​ಡೌನ್​ನಿಂದಾಗಿ ಹೊಟ್ಟೆಪಾಡು ಹೇಗೆ ಎಂಬ ಆತಂಕ ಈ ಎಲ್ಲಾ ಕಾರಣಗಳಿಂದಾಗಿ ಬೆಂಗಳೂರಿನ ಬಹುತೇಕ ಮಂದಿ ಊರು ಖಾಲಿ ಮಾಡ್ತಿದ್ದಾರೆ. ಗಂಟು ಮೂಟೆ ಕಟ್ಟಿಕೊಂಡ ಜನರು ಖಾಸಗಿ ವಾಹನಗಳಲ್ಲಿ, ಗೂಡ್ಸ್ ಗಾಡಿಗಳ ಮೂಲಕ ಬೆಳಗ್ಗೆಯಿಂದಲೇ ಬೆಂಗಳೂರಿನಿಂದ ಜಾಗ ಖಾಲಿ ಮಾಡ್ತಿದ್ದಾರೆ.

ಬೆಂಗಳೂರು ತ್ಯಜಿಸಿ ಹೊರಟವರಲ್ಲಿ ಬಹುತೇಕ ಕುಟುಂಬ ಟ್ಯಾಕ್ಸಿ ಸೇವೆ, ಬಾರ್​, ಹೋಟೆಲ್​ ಇವುಗಳನ್ನೇ ನಂಬಿಕೊಂಡಿದೆ. ಇವರೆಲ್ಲರೂ ರಾಜ್ಯ ರಾಜಧಾನಿ ಮತ್ತೆ ಮೊದಲಿನಂತೆಯೇ ಆದ ಬಳಿಕ ವಾಪಸ್ಸಾಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ಸರ್ಕಾರಿ ವಾಹನದಲ್ಲಿ ಬಿಜೆಪಿ ಹಣ ಸಾಗಣೆ: ದಿನೇಶ್‌ ಗುಂಡೂರಾವ್

Spread the loveಮೈಸೂರು: ‘ಬಿಜೆಪಿ ನಾಯಕರು ಸರ್ಕಾರಿ ವಾಹನಗಳಲ್ಲಿ ಕೋಟ್ಯಂತರ ರೂಪಾಯಿ ಸಾಗಿಸಿ ಹಂಚುತ್ತಿದ್ದಾರೆ. ಐಟಿ, ಇಡಿ ರಕ್ಷಣೆಯಲ್ಲೇ ಈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ