Breaking News

ಚುನಾವಣಾ ಫಲಿತಾಂಶ ದಿನದಂದು ರಾಜಕೀಯ ಪಕ್ಷಗಳ ವಿಜಯೋತ್ಸವ ನಿಷೇಧ : ಚುನಾವಣಾ ಆಯೋಗದಿಂದ ಮಹತ್ವದ ನಿರ್ಧಾರ

Spread the love

ನವದೆಹಲಿ : ದೇಶದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮೇ.2 ರ ಚುನಾವಣಾ ಫಲಿತಾಂಶ ದಿನದಂದು ರಾಜಕೀಯ ಪಕ್ಷಗಳ ವಿಜಯೋತ್ಸವಕ್ಕೆ ನಿಷೇಧ ಹೇರಿ ಚುನಾವಣಾ ಆಯೋಗ ಮಹತ್ವದ ನಿರ್ಧಾರ ಆದೇಶ ಹೊರಡಿಸಿದೆ.

ದೇಶದಲ್ಲಿ ಕೊರೊನಾ ವೈರಸ್ ಸೋಂಕಿನ ಅಬ್ಬರ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ರಾಜಕೀಯ ಪಕ್ಷಗಳ ವಿಜಯೋತ್ಸವಕ್ಕೆ ನಿಷೇಧ ಹೇರಿದ್ದು, ಚುನಾವಣೆ ಫಲಿತಾಂಶದ ಬಳಿಕ ವಿಜೇತ ಅಭ್ಯರ್ಥಿಯ ಜೊತೆಗೆ ಇಬ್ಬರಿಗಿಂತ ಹೆಚ್ಚು ಮಂದಿ ಇರಲು ಅನುಮತಿ ಇಲ್ಲ. ಅಭ್ಯರ್ಥಿಯು ಅಧಿಕೃತ ಪ್ರತಿನಿಧಿ ಚುನಾವಣಾ ಪ್ರಮಾಣಪತ್ರ ಪಡೆಯಬೇಕು ಎಂದು ಚುನಾವಣಾ ಆಯೋಗ ಸೂಚನೆ ನೀಡಿದೆ.

ಇನ್ನು ಮೇ. 2 ರಂದು ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿ ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಚುನಾವಣೆಯ ಫಲಿತಾಂಶ ಪ್ರಕಟವಾಗಲಿದ್ದು, ಮೇ. 2 ರಂದು ಚುನಾವಣಾ ವಿಜಯೋತ್ಸವನ್ನು ನಿಷೇಧಿಸಲಾಗಿದೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ