Breaking News

ಒಂದೇ ದಿನ ಸರ್ಕಾರಿ ಶಾಲೆಯ ಮೂವರು ಶಿಕ್ಷಕರು ಕೊರೊನಾ ಸೋಂಕಿಗೆ ಬಲಿ

Spread the love

ತುಮಕೂರು: ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಒಂದೇ ದಿನ ಸರ್ಕಾರಿ ಶಾಲೆಯ ಮೂವರು ಶಿಕ್ಷಕರು ಕೊರೊನಾ ಸೋಂಕಿಗೆ ಬಲಿಯಾಗಿರುವ ಘಟನೆ ತುಮಕೂರಿನ ಕುಣಿಗಲ್ ತಾಲೂಕಿನಲ್ಲಿ ನಡೆದಿದೆ.

ಕಿಣಿಗಲ್ ತಾಲೂಕಿನ ಉಜ್ಜಯನಿ ಪ್ರೌಢ ಶಾಲೆಯ ಶಿಕ್ಷಕ ಶಿವರಾಮೇಗೌಡ, ಮಲ್ಲಿಪಾಳ್ಯ ಪ್ರೌಢ ಶಾಲೆಯ ಪರಮೇಶ್ವರ್ ಆಚಾರ್ ಹಾಗೂ ತುರುಗೂರು ಪ್ರಾಥಮಿಕ ಶಾಲಾ ಶಿಕ್ಷಕ ಕೃಷ್ಣಪ್ಪ ಕೊರೊನ ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಈ ನಡುವೆ ತುಮಕೂರು ಜಿಲ್ಲೆಯಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಅತಿ ಹೆಚ್ಚು ಸೋಂಕಿತರು ಇರುವ 18 ಬಡವಾಣೆಗಳನ್ನು ಕೋವಿಡ್ ಹಾಟ್ ಸ್ಪಾಟ್ ಎಂದು ಗುರುತಿಸಲಾಗಿದೆ.


Spread the love

About Laxminews 24x7

Check Also

ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?

Spread the love ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ