Breaking News
Home / ರಾಜ್ಯ / ಆರ್‌ಎಸ್‌ಎಸ್‌ನಿಂದ ಕೋವಿಡ್ ನೆರವು ಕೇಂದ್ರ ಸ್ಥಾಪನೆ..!

ಆರ್‌ಎಸ್‌ಎಸ್‌ನಿಂದ ಕೋವಿಡ್ ನೆರವು ಕೇಂದ್ರ ಸ್ಥಾಪನೆ..!

Spread the love

ಹುಬ್ಬಳ್ಳಿ: ಪರಸ್ಪರ ಸಹಕಾರದಿಂದ ಮಾತ್ರ ಕೊರೊನಾ ಎರಡನೇ ಅಲೆಯನ್ನು ಎದುರಿಸಲು ಸಾಧ್ಯ ಎಂದು ಆರ್‍ಎಸ್‍ಎಸ್ ಹಿರಿಯ ಪ್ರಚಾರಕ ರಾಷ್ಟ್ರೀಯ ವ್ಯವಸ್ಥಾ ಪ್ರಮುಖ ಮಂಗೇಶ ಬೇಂಡೆ ಹೇಳಿದರು.

ಸೇವಾ ಭಾರತಿ ಟ್ರಸ್ಟ್ ಹಾಗೂ ನೆರವು ಸಹಯೋಗದಲ್ಲಿ ಇಲ್ಲಿನ ಕಿಮ್ಸ್ ಎದುರು ಸ್ಥಾಪಿಸಲಾದ ಕೊರೊನಾ ಮಾಹಿತಿ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕೊರೊನಾ ವಿಚಾರದಲ್ಲಿ ಭಾರತವನ್ನು ಇತರೆ ರಾಷ್ಟ್ರಗಳ ಜೊತೆಗೆ ಹೋಲಿಕೆ ಮಾಡುವುದು ಸರಿಯಲ್ಲ. ಅಮೆರಿಕ, ಇಂಗ್ಲೆಂಡ್ ಗೆ ಹೋಲಿಸಿದರೆ ಭಾರತ ಕೊರೊನಾ ಸೋಂಕನ್ನು ಸಮರ್ಥವಾಗಿ ಎದುರಿಸುತ್ತದೆ. ನಮ್ಮ ದೇಶದಲ್ಲಿ ಪರಸ್ಪರ ಸಹಕಾರದಿಂದ ಕೊರೊನಾ ಎದುರಿಸಲಾಗುತ್ತಿದೆ ಎಂದು ಹೇಳಿದರು.

ಸಂಘದಿಂದ 5 ಲಕ್ಷಕ್ಕೂ ಹೆಚ್ಚಿನ ಕಾರ್ಯಕರ್ತರು ಹಗಲಿರುಳು ಸ್ವಯಂಪ್ರೇರಿತ ಕೋವಿಡ್ ವಾರಿಯರ್ ಆಗಿ ಶ್ರಮಿಸುತ್ತಿದ್ದಾರೆ. ಆತ್ಮಸ್ಥೈರ್ಯ ಹೆಚ್ಚಿಸುವ ಕಾರ್ಯವನ್ನು ಸಂಘದ ಕಡೆಯಿಂದ ಮಾಡುತ್ತಿದ್ದು, ಸಂಘ ಈ ಕಾರ್ಯವನ್ನು ಸಹಾಯ ಎಂಬ ಭಾವನೆಯಿಂದ ಅಲ್ಲದೆ, ಸಹಕಾರ ಸೌಹಾರ್ದದಿಂದ ಎಂಬಂತೆ ಕಾರ್ಯ ಮಾಡುತ್ತಿದೆ ಎಂದರು. ನಮ್ಮ ಮಾಧ್ಯಮಗಳು ಸಮಾಜದಲ್ಲಿ ಜನರಿಗೆ ಆತ್ಮವಿಶ್ವಾಸ ಹೆಚ್ಚಿಸುವ ಮತ್ತು ಜನರ ಮನಸ್ಥಿತಿಗೆ ಧೈರ್ಯ ತುಂಬುವ ಕಾರ್ಯ ಮಾಡಬೇಕಾಗಿದೆ ಎಂದು ಮನವಿ ಮಾಡಿದರು.

ಕಿಮ್ಸ್ ನಿರ್ದೇಶಕ ಡಾ. ರಾಮಲಿಂಗಪ್ಪ ಅಂಟರಠಾಣೆ ಆರೋಗ್ಯ ಇಲಾಖೆಗಳೊಂದಿಗೆ ಸಹಕಾರ ನೀಡುವ ಸಂಘ ಸಂಸ್ಥೆಗಳ ಕಾರ್ಯ ಶ್ಲಾಘನೀಯವಾದದ್ದು, ಹಾಗೂ ಬಡವರಿಗೆ ನೆರವು ನೀಡುವ ಕೆಲಸ ಪ್ರತಿಯೊಂದು ಸಹಕಾರಿ ಸಂಘ ಸಂಸ್ಥೆಗಳಿಂದ ಆಗುತ್ತಿರುವುದು ಸಂತೋಷವಾಗಿದೆ ಎಂದು ತಿಳಿಸಿದರು. ಮೇ ತಿಂಗಳಲ್ಲಿ ಕೊರೊನಾ ವಿಕೋಪಕ್ಕೆ ಹೋಗುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಸಂಘ ಸಂಸ್ಥೆಗಳು ಜನತೆಯ ನೆರವಿಗೆ ಧಾವಿಸಿರುವುದು ಸ್ವಾಗತಾರ್ಹ ಎಂದರು.

ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ವಿಭಾಗ ಕಾರ್ಯವಾಹಕ ಕಿರಣ ಗುಡ್ಡದಕೇರಿ ಮಾತನಾಡಿ, ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಸಂಘ ಯಾವ ರೀತಿಯಲ್ಲಿ ಸ್ಪಂದನೆ ಮಾಡುತ್ತದೆಯೋ ಅದೇ ರೀತಿ ಈಗಲೂ ಮುಂದಾಗಿದೆ. ಮೊದಲನೇಯದಾಗಿ ಸರ್ಕಾರದ ಕಾನೂನುಗಳನ್ನು ತಿಳಿಸಿ ಜಾಗೃತಿ ಮೂಡಿಸುವ ಕಾರ್ಯ, ರಕ್ತದಾನ ಶಿಬಿರಗಳನ್ನು ಏರ್ಪಡಿಸಿರುವುದು, ಸಹಾಯವಾಣಿ ಮೂಲಕ ಕೋವಿಡ್ ಮಾಹಿತಿಯನ್ನು ನೀಡುವ ಕಾರ್ಯ, ಟೆಲಿ ಮೆಡಿಸಿನ್, ಔಷಧ ಒದಗಿಸುವುದು, ಮೃತಪಟ್ಟರೆ ಅಂತ್ಯಸಂಸ್ಕಾರಕ್ಕೆ ನೆರವಾಗುವುದು, ಅಲ್ಲದೇ ಕೋವಿಡ್ ಕೇರ್ ಸೆಂಟರ್ ಸ್ಥಾಪನೆಯ ಉದ್ದೇಶವಿದ್ದು, ಕಾರ್ಯ ಪ್ರವೃತ್ತರಾಗಿದ್ದೇವೆ ಎಂದರು.

ಸಾರ್ವಜನಿಕರು ನೆರವಿಗಾಗಿ 7411734247 ಹಾಗೂ 7411744246 ಈ ನಂಬರ್ ಗಳಿಗೆ ಕರೆ ಮಾಡಿ ತಮ್ಮ ಕೋವಿಡ್ ಸಂಬಂದಿತ ಏನೇ ಸಮಸ್ಯೆಗಳಿದ್ದರೂ ಸಲಹೆ ಪಡೆಯಬಹುದಾಗಿದೆ.


Spread the love

About Laxminews 24x7

Check Also

ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ.: ಲಕ್ಷ್ಮೀ ಹೆಬ್ಬಾಳ್ಕರ್

Spread the love ಬೆಳಗಾವಿ: ರಾಜ್ಯದ ರಾಜಕಾರಣ, ದೇಶದ ರಾಜಕಾರಣ ತಲೆ ತಗ್ಗಿಸುವ ಘಟನೆಯಿದು. ನಾಗರಿಕ ಸಮಾಜ ತಲೆ ತಗ್ಗಿಸುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ