Breaking News

ಸಚಿವರ ಹಾಗೂ 1 ವರ್ಷದ ಸಂಬಳ, ಶಾಸಕರ 1 ತಿಂಗಳ ಸಂಬಳ ಕೋವಿಡ್ ನಿಯಂತ್ರಣಕ್ಕಾಗಿ.”: ಆರ್.ಅಶೋಕ್

Spread the love

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಸಿಎಂ ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ಕೋವಿಡ್ ರೋಗಿಗಳಿಗೆ ಸೂಕ್ತ ಚಿಕಿತ್ಸೆ, ಲಸಿಕೆ ಹಾಗೂ ಆಕ್ಸಿಜನ್ ವ್ಯವಸ್ಥೆಗಳ ನಿರ್ವಹಣೆಗೂ ಕೂಡ ಯಾವೆಲ್ಲ ರೀತಿಯ ಕ್ರಮ ಕೈಗೊಳ್ಳಬೇಕು ಎಂಬ ಬಗ್ಗೆ ಸಿಎಂ ನಿರ್ದೇಶನ ನೀಡಿದ್ದಾರೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕೋವಿಡ್ ನಿಯಂತ್ರಣಕ್ಕಾಗಿ ಸಚಿವರ 1 ವರ್ಷದ ಸಂಬಳ ಹಾಗೂ ಶಾಸಕರ 1 ತಿಂಗಳ ಸಂಬಳ ನೀಡಲು ಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದರು.

ಇದೇ ವೇಳೆ 230 ಎಕರೆ ಜಮೀನುಗಳನ್ನು ಸ್ಮಶಾನಕ್ಕಾಗಿ ಬಳಸಿಕೊಳ್ಳಲು ತುರ್ತು ಆದೇಶ ಹೊರಡಿಸಲಾಗಿದ್ದು, ಕೋವಿಡ್ ರೋಗಿಗಳ ಶವಸಂಸ್ಕಾರಕ್ಕೆ ಇದ್ದ ಅಡೆತಡೆಗಳನ್ನು ಕಂದಾಯ ಇಲಾಖೆಯಿಂದ ಬಗೆಹರಿಸಲಾಗಿದೆ ಎಂದು ತಿಳಿಸಿದರು.


Spread the love

About Laxminews 24x7

Check Also

ಡಿಕೆಶಿ ಪರವಾಗಿ ನಾವಿದ್ದೇವೆ, ದೆಹಲಿಯಿಂದ ನಾಳೆನೇ ಬರಲಿ ತೊಂದ್ರೆ ಇಲ್ಲ: ಸತೀಶ್ ಜಾರಕಿಹೊಳಿ

Spread the loveಬೆಂಗಳೂರು: ದೆಹಲಿಗೆ  ತೆರಳಿರುವ ಡಿಸಿಎಂ ಡಿಕೆಶಿ  ಪರವಾಗಿ ನಾವಿದ್ದೇವೆ. ಅವರು ನಾಳೆನೇ ಬರಲಿ ತೊಂದರೆ ಇಲ್ಲ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ