Breaking News

ಪ್ರಾಣ ಉಳಿಸಬೇಕಾದವನೇ ರೆಮಿಡಿಸಿವಿರ್ ಬ್ಲಾಕ್ ಮಾಡಿ ಅರೆಸ್ಟ್ ಆದ

Spread the love

ಬೆಂಗಳೂರು: ಕೊರೊನಾ ಸೋಂಕಿತರ ಚಿಕಿತ್ಸೆಗೆ ಪರಿಣಾಮಕಾರಿಯಾಗಿರುವ ರೆಮಿಡಿಸಿವಿರ್​​​ಅನ್ನು ಅಕ್ರಮವಾಗಿ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ಆರು ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಯಲಹಂಕ ಆಸ್ಪತ್ರೆಯ ಸ್ಟಾಪ್ ನರ್ಸ್ ಮತ್ತು ಆಯುರ್ವೇದ ಆಸ್ಪತ್ರೆಯ ವೈದ್ಯನೊಬ್ಬನ ಸೇರಿದಂತೆ ಆರು ಮಂದಿಯ ಬಂಧನವಾಗಿದ್ದು, ಒಟ್ಟು 18 ರೆಮಿಡಿಸಿವಿರ್ ಇಂಜಕ್ಷನ್​​ಗಳನ್ನು ಸಿಸಿಬಿ ಅಧಿಕಾರಿಗಳು ಸೀಜ್​ ಮಾಡಿದ್ದಾರೆ.

ದೇಶದಲ್ಲಿ ಕೊರೊನಾ ಸುನಾಮಿ ದಿನೇ ದಿನೇ ವ್ಯಪಿಸುತ್ತಿದ್ದು, ವೈದ್ಯರು, ರೋಗಿಗಳು ರೆಮ್ಡೆಸಿವಿರ್ ಪಡೆಯಲು ಪರದಾಡುವಂತಾಗಿದೆ. ವಾರಗಳ ಕಾಲ ಅಲೆದರೂ ಔಷಧಿ ಸಿಗುತ್ತಿಲ್ಲ ಎಂದು ಹಲವರು ತಮ್ಮ ಸಂಕಷ್ಟ ತೋಡಿಕೊಂಡಿದ್ದಾರೆ. ಇದನ್ನೇ ತಮ್ಮ ಲಾಭಕ್ಕಾಗಿ ಬಳಕೆ ಮಾಡಿಕೊಳ್ಳುತ್ತಿರುವ ಕೆಲ ವೈದ್ಯಕೀಯ ಸಿಬ್ಬಂದಿ, ರೆಮಿಡಿಸಿವಿರ್ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದಾರೆ. ಇಂತಹವರ ವಿರುದ್ಧ ಸದ್ಯ ಪೊಲೀಸರು ವಿಶೇಷ ಕಾರ್ಯಾಚರಣೆ ಆರಂಭಿಸಿದ್ದಾರೆ.


Spread the love

About Laxminews 24x7

Check Also

ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?

Spread the love ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ