Breaking News
Home / ರಾಜಕೀಯ / ಕೋವಿಡ್ ಲಸಿಕೆ ಪಡೆದ ಶಾಸಕ ಯತ್ನಾಳ: ಲಸಿಕೆ ಪಡೆಯಲು ಜನರಿಗೆ ಮನವಿ

ಕೋವಿಡ್ ಲಸಿಕೆ ಪಡೆದ ಶಾಸಕ ಯತ್ನಾಳ: ಲಸಿಕೆ ಪಡೆಯಲು ಜನರಿಗೆ ಮನವಿ

Spread the love

ವಿಜಯಪುರ: ದೇಶದ ಎಲ್ಲ ನಾಗರಿಕರು ಕೋವಿಡ್ ಲಸಿಕೆ ಪಡೆದು, ಕೋವಿಡ್ ಮುಕ್ತ ಭಾರತ ನಿರ್ಮಾಣಕ್ಕೆ ಸಹಕರಿಸಿ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಶುಕ್ರವಾರ ವಿಜಯಪುರ ನಗರದ ವಾರ್ಡ ನಂ-3 ರಲ್ಲಿ ಗ್ಯಾಂಗ್ ಬಾವಡಿ ಸರಕಾರಿ ಶಾಲೆ ನಂ-10 ರಲ್ಲಿ ಎರಡನೇ ಹಂತದ ಕೋವಿಡ್ ಲಸಿಕೆ ಪಡೆದು ಬಳಿಕ ಜನರಿಗೆ ಲಸಿಕೆ ಪಡೆಯುವ ಅಗತ್ಯ ಹಾಗೂ ಮಹತ್ವದ ಕುರಿತು ವಿವರಿಸಿದರು.

ಭಾರತದಲ್ಲೇ ಅಭಿವೃದ್ಧಿ ಪಡಿಸಿದ, ಅತ್ಯಂತ ಸುರಕ್ಷಿತ, ಕೋವಿಡ್ ಸೋಂಕು ನಿಗ್ರಹದಲ್ಲಿ ಕೋವ್ಯಾಕ್ಸಿನ್, ಕೋವಿಶೀಲ್ಡ್ ಲಸಿಕೆಗಳು ಮಹತ್ವದ ಪಾತ್ರ ವಹಿಸುತ್ತಿವೆ. ಸರ್ಕಾರದ ಮಾರ್ಗಸೂಚಿ ಅನ್ವಯ ಲಸಿಕೆ ಪಡೆಯಲು ಅರ್ಹತೆ ಇರುವ ಹಿರಿಯ ನಾಗರಿಕರು, ವಯಸ್ಕರು ಲಸಿಕೆ ಹಾಕಿಸಿಕೊಂಡು ಕೋವಿಡ್ ಮುಕ್ತ ವಿಜಯಪುರ ನಿರ್ಮಾಣಕ್ಕೆ ಕೈಜೋಡಿಸಿ ಎಂದು ವಿನಂತಿಸಿದರು.

ಶ್ರೀ ಸಿದ್ಧೇಶ್ವರ ಸಂಸ್ಥೆ ಚೇರ್ಮನ್ ಬಸಯ್ಯ ಹಿರೇಮಠ, ವೈದ್ಯಾಧಿಕಾರಿ ಡಾ.ಕೇಸಸಿಂಗ್ ಗುಂಡಬಾವಡಿ, ಡಾ.ಕವಿತಾ ದೊಡ್ಡಮನಿ, ವೂಡಾ ಅಧ್ಯಕ್ಷ ಶ್ರೀಹರಿ ಗೊಳಸಂಗಿ ಸೇರಿದಂತೆ ಇತರರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ