ಮಂತ್ರಾಲಯ – ಶ್ರೀ ಕ್ಷೇತ್ರ ಮಂತ್ರಾಲಯದ ಪೀಠಾಧಿಪತಿಗಳ ಆಪ್ತ ಕಾರ್ಯದರ್ಶಿ ಎಸ್.ಎನ್. ಸುಯಮೀಂದ್ರ ಆಚಾರ್ ಅವರು ದೆಹಲಿಯಲ್ಲಿ ಇಂದು ಸಾಯಂಕಾಲ 6 ಗಂಟೆಗೆ ಕೋವಿಡ್ ಗೆ ಬಲಿಯಾಗಿದ್ದಾರೆ. ಅವರಿಗೆ 49 ವರ್ಷ ವಯಸ್ಸಾಗಿತ್ತು.
ವಾರದ ಹಿಂದೆ ಅವರನ್ನು ದೆಹಲಿಯಲ್ಲಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಉಪಚಾರ ಫಲಿಸದೆ ಕೊನೆಯುಸಿರೆಳೆದರು. ಮಂತ್ರಾಲಯ ಕ್ಷೇತ್ರ ಅಭಿವೃದ್ಧಿಗೆ ಸುಯಮೀಂದ್ರ ಆಚಾರ್ ಸೇವೆ ಅನನ್ಯ.