Breaking News

ಚುನಾವಣಾ ಕರ್ತವ್ಯಕ್ಕೆ ತೆರಳಿದ್ದ ಶಿಕ್ಷಕ ಕೋವಿಡ್ ಗೆ ಬಲಿ

Spread the love

ರಾಯಚೂರು: ಮಸ್ಕಿ ಉಪಚುನಾವಣೆ ಕರ್ತವ್ಯಕ್ಕೆ ಹಾಜರಾಗಿದ್ದ ಶಿಕ್ಷಕ ಕೋವಿಡ್ ಗೆ ಬಲಿಯಾಗಿದ್ದಾರೆ.

ದೇವದುರ್ಗ ತಾಲೂಕಿನ ಸುಂಕೇಶ್ವರಹಾಳ ಪ್ರೌಢಶಾಲೆಯ ವಿಜ್ಞಾನ ವಿಷಯದ ಶಿಕ್ಷಕ ಕಟ್ಟೆಪ್ಪ (40) ಸಾವನ್ನಪ್ಪಿದವರು. ಸೋಂಕು ತಗುಲಿದ ಹಿನ್ನೆಲೆಯಲ್ಲಿ ರಾಯಚೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗ್ಗೆ ಸಾವಿಗೀಡಾಗಿದ್ದಾರೆ.

 

ಶಿಕ್ಷಕ ಕಟ್ಟೆಪ್ಪ ಇತ್ತೀಚೆಗೆ ಮಸ್ಕಿ ಉಪಚುನಾವಣೆಯ ಕರ್ತವ್ಯಕ್ಕೆ ಹಾಜರಾಗಿದ್ದರು. ನಂತರ ಅವರಿಗೆ ಕೋವಿಡ್ ಲಕ್ಷಣಗಳು ಕಂಡು ಬಂದಿದ್ದರಿಂದ ಪರೀಕ್ಷೆಗೆ ಒಳಪಟ್ಟಾಗ ಕೋವಿಡ್ ಪಾಸಿಟಿವ್ ದೃಢವಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಮಹಾಮಾರಿ ಕೋವಿಡ್ ವಿರುದ್ಧ ಹೋರಾಟ ನಡೆಸಿ ಸಾವನ್ನಪ್ಪಿದ್ದಾರೆ.

ಚುನಾವಣೆಯಲ್ಲಿ ಕರ್ತವ್ಯ ನಿಭಾಯಿಸಿದ ಇತರರಿಗೂ ಸದ್ಯ ಕೋವಿಡ್ ಭೀತಿ ಕಾಡುತ್ತಿದೆ. ದೇವದುರ್ಗ ತಾಲೂಕಿನಲ್ಲಿ ಆತಂಕ ಮನೆ ಮಾಡಿದೆ.


Spread the love

About Laxminews 24x7

Check Also

ಫಿನಾಯಿಲ್ ಮಾರಾಟ ಮಾಡುತ್ತ ಚಿನ್ನದಂಗಡಿ ದೋಚಿದ್ದ ರಾಜಸ್ಥಾನಿ ಗ್ಯಾಂಗ್

Spread the loveಬೆಂಗಳೂರು : ಫಿನಾಯಿಲ್ ಸರಬರಾಜು ಮಾಡುತ್ತ ಚಿನ್ನದಂಗಡಿ ದೋಚಿದ್ದ ಐವರು ಆರೋಪಿಗಳನ್ನ ಕೆ. ಆರ್. ಪುರಂ ಠಾಣೆ ಪೊಲೀಸರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ