Breaking News

ಸರ್ಕಾರದಿಂದ ಮತ್ತೆ ಮಾರ್ಗಸೂಚಿ ಪರಿಷ್ಕರಣೆ – ನಾಳೆಯಿಂದ ರಾಜ್ಯಾದ್ಯಂತ ಮಾರುಕಟ್ಟೆಗಳು ಸ್ತಬ್ಧ

Spread the love

ಬೆಂಗಳೂರು: ಮಾರುಕಟ್ಟೆಗಳಲ್ಲಿ ಜನಸಂದಣಿ ನಿಯಂತ್ರಿಸುವ ಉದ್ದೇಶದಿಂದ ಸರ್ಕಾರ ತನ್ನ ಮಾರ್ಗಸೂಚಿಯನ್ನ ಪರಿಷ್ಕರಣೆ ಮಾಡಿದೆ. ನಾಳೆಯಿಂದ ಎಲ್ಲಾ ರೀತಿಯ ಸಂತೆಗಳು, ವಾರದ ಸಂತೆಗಳ ಬಂದ್ ಆಗಲಿವೆ.

 

ಎಪಿಎಂಸಿ ಮತ್ತು ದಿನಸಿ ಅಂಗಡಿಗಳು ಬೆಳಗ್ಗೆ 6 ರಿಂದ 12 ಗಂಟೆಯವರೆಗೆ ನೀಡಲಾಗಿದೆ. ಈ ಮೊದಲು ಬೆಳಗ್ಗೆ 10 ಗಂಟೆಯವರೆಗೆ ಮಾತ್ರ ಅವಕಾಶ ನೀಡಿತ್ತು. ಜನಸಂದಣಿ ತಡೆಯುವ ಹಿನ್ನೆಲೆ ಸಮಯ ವಿಸ್ತರಣೆ ಮಾಡಲಾಗಿದೆ ಎಂದು ಸರ್ಕಾರ ಹೇಳಿದೆ.

ಮಾರುಕಟ್ಟೆ ಬಂದ್ ಆದ್ರೂ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಹಾಪ್ ಕಾಮ್ಸ್ ತೆರೆಯಲು ಅನುಮತಿ ನೀಡಲಾಗಿದೆ. ತಳ್ಳುವ ಗಾಡಿಗಳ ಮೂಲಕ ಹಣ್ಣು, ತರಕಾರಿ ಮಾರಲು ಅವಕಾಶ ಕಲ್ಪಿಸಲಾಗಿದ್ದು, ದುಬಾರಿ ಬೆಲೆಗೆ ಮಾರಾಟ ಮಾಡುವಂತಿಲ್ಲ ಎಂದು ಸರ್ಕಾರ ಎಚ್ಚರಿಕೆ ನೀಡಿದೆ.


Spread the love

About Laxminews 24x7

Check Also

ಅಕ್ರವಾಗಿ ಜೂಜಾಟ ನಡೆಸುತ್ತಿದ್ದ ಅಡ್ಡೆಯ ಮೇಲೆ ಬೆಳಗಾವಿ ಪೊಲೀಸರು ದಾಳಿ ನಡೆಸಿ 12 ಆರೋಪಿಗಳನ್ನು ಬಂಧಿಸಿದ್ದಾರೆ.

Spread the loveಅಕ್ರವಾಗಿ ಜೂಜಾಟ ನಡೆಸುತ್ತಿದ್ದ ಅಡ್ಡೆಯ ಮೇಲೆ ಬೆಳಗಾವಿ ಪೊಲೀಸರು ದಾಳಿ ನಡೆಸಿ 12 ಆರೋಪಿಗಳನ್ನು ಬಂಧಿಸಿದ್ದಾರೆ. ನಂದಿಹಳ್ಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ