Breaking News
Home / ಜಿಲ್ಲೆ / ಕೊಡಗು / ಸಂತೆ ವ್ಯಾಪಾರಿಗಳಿಗೆ ಪೊಲೀಸರಿಂದ ಲಾಠಿ ಏಟು……..

ಸಂತೆ ವ್ಯಾಪಾರಿಗಳಿಗೆ ಪೊಲೀಸರಿಂದ ಲಾಠಿ ಏಟು……..

Spread the love

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕೊರೊನಾ ಮಹಾಮಾರಿ ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿದೆ. ಹೀಗಾಗಿ ಕೊಡಗು ಜಿಲ್ಲೆಯಲ್ಲಿ ಸಂತೆಗಳನ್ನು ನಡೆಸದಂತೆ ನಿರ್ಬಂಧ ಹೇರಲಾಗಿದೆ. ಆದರೂ ನಿಯಮ ಉಲ್ಲಂಘಿಸಿ ಸೋಮವಾರಪೇಟೆಯಲ್ಲಿ ಇಂದು ವ್ಯಾಪಾರಿಗಳು ಸಂತೆಯಲ್ಲಿ ಅಂಗಡಿ ಹಾಕಿದ್ದರು. ವಿಷಯ ತಿಳಿದ ಪೊಲೀಸರು ಅಂಗಡಿಗಳನ್ನು ತೆರವು ಮಾಡುವಂತೆ ಖಡಕ್ಕಾಗಿ ಹೇಳಿದರೂ, ಕ್ಯಾರೆ ಎನ್ನಲಿಲ್ಲ. ಆಗ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ.

ಎಷ್ಟೇ ಎಚ್ಚರಿಕೆ ನೀಡಿದರೂ ಕೇಳದ ಹಿನ್ನೆಲೆ ಪೊಲೀಸರಿಗೆ ಬೇರೆ ದಾರಿಯಿಲ್ಲದೆ ಲಾಠಿ ರುಚಿ ತೋರಿಸಿದರು. ಎಷ್ಟೇ ಹೇಳಿದರೂ ವ್ಯಾಪಾರಸ್ಥರು ವ್ಯಾಪಾರ ಮಾಡುತ್ತಲೇ ಇದ್ದರು. ಇದರಿಂದ ಬೇಸತ್ತ ಪೊಲೀಸರು ಲಾಠಿ ಏಟು ನೀಡಿದ್ದಾರೆ. ಆಗ ವ್ಯಾಪಾರಸ್ಥರು ಅಂಗಡಿಗಳನ್ನು ತೆರವು ಮಾಡಲು ಮುಂದಾಗಿದ್ದಾರೆ. ಅಷ್ಟೊತ್ತಿಗೆ ಸ್ಥಳಕ್ಕೆ ಬಂದ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಟ್ಯ್ರಾಕ್ಟರ್ ಮೂಲಕ ಹಣ್ಣು ತರಕಾರಿಗಳನ್ನು ತುಂಬಿಕೊಂಡು ಹೋಗಲು ಮುಂದಾದರು. ಇದರಿಂದ ಎಚ್ಚೆತ್ತ ವ್ಯಾಪಾರಿಗಳು, ಅಂಗಡಿಗಳ ಗಂಟು ಮೂಟೆ ಕಟ್ಟಿಕೊಂಡು ಜಾಗ ಖಾಲಿ ಮಾಡಿದ್ದಾರೆ.


Spread the love

About Laxminews 24x7

Check Also

*ಶ್ರೀ ಜಡಿಸಿದ್ದೇಶ್ವರ ದೇವಸ್ಥಾನದಲ್ಲಿ ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ*

Spread the loveಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ