Breaking News

ಬಸವಕಲ್ಯಾಣದಲ್ಲಿ ಕಾಂಗ್ರೆಸ್ ಗೆಲ್ಲುವ ಎಲ್ಲ ಅವಕಾಶವಿತ್ತು, ರಾಜಕೀಯ ಕುತಂತ್ರದಿಂದ ಹಿನ್ನಡೆಯಾಗಿದೆ; ಯತೀಂದ್ರ ಸಿದ್ದರಾಮಯ್ಯ ಟ್ವೀಟ್

Spread the love

ಮೈಸೂರು: ಬಸವಕಲ್ಯಾಣ ಕ್ಷೇತ್ರದ ಬೈ ಎಲೆಕ್ಷನ್ ಫಲಿತಾಂಶ ವಿಚಾರಕ್ಕೆ ಸಂಬಂಧಿಸಿ ಕಾಂಗ್ರೆಸ್ ಶಾಸಕ ಯತೀಂದ್ರ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಬಸವಕಲ್ಯಾಣದಲ್ಲಿ ಕಾಂಗ್ರೆಸ್ ಗೆಲ್ಲುವ ಎಲ್ಲ ಅವಕಾಶವಿತ್ತು. ಆದರೆ ಜಾತ್ಯತೀತ ಮುಖವಾಡ ಧರಿಸಿರುವ ಕೋಮುವಾದಿಗಳ ರಾಜಕೀಯ ಕುತಂತ್ರದಿಂದ ಕಾಂಗ್ರೆಸ್ ಹಿನ್ನಡೆಯಾಗಿದೆ. ನಕಲಿ ಜಾತ್ಯತೀತರ ಬಗ್ಗೆ ಮುಂದೆ ಜಾಗೃತರಾಗಿರಬೇಕೆಂದು ಜೆಡಿಎಸ್ ಬಗ್ಗೆ ಪರೋಕ್ಷವಾಗಿ ಶಾಸಕ ಯತೀಂದ್ರ ಆಕ್ರೋಶ ಹೊರಹಾಕಿದ್ದಾರೆ.

ಮಸ್ಕಿ ವಿಧಾನಸಭೆ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಹೆಚ್ಚಿನ ಮತ ನೀಡಿ ಗೆಲುವಿಗೆ ಕಾರಣರಾದ ಮತದಾರರಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಹಾಗೂ ನಮ್ಮ ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸಿದ ಕಾರ್ಯಕರ್ತರಿಗೆ ಧನ್ಯವಾದಗಳು ಮತ್ತು ಜಯ ಗಳಿಸಿದ ಬಸನಗೌಡ ತುರವಿಹಾಳ ಅವರಿಗೆ ಅಭಿನಂದನೆಗಳು ಎಂದು ಟ್ವೀಟ್ ಮಾಡಿದ್ದಾರೆ.

 


Spread the love

About Laxminews 24x7

Check Also

ಹಸಿದ ಹೊಟ್ಟೆಗೆ ಆಸರೆ: ಮುನವಳ್ಳಿಯಲ್ಲಿ ಇಂದಿರಾ ಕ್ಯಾಂಟಿನ್ ಲೋಕಾರ್ಪಣೆ!

Spread the love​”ಬಡವರ ಮತ್ತು ಶ್ರಮಿಕ ವರ್ಗದ ಜನರ ಹಸಿವು ನೀಗಿಸುವ ಉದ್ದೇಶದಿಂದ, ಇಂದು ಮುನವಳ್ಳಿ ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಲಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ