ಮೈಸೂರು: ಬಸವಕಲ್ಯಾಣ ಕ್ಷೇತ್ರದ ಬೈ ಎಲೆಕ್ಷನ್ ಫಲಿತಾಂಶ ವಿಚಾರಕ್ಕೆ ಸಂಬಂಧಿಸಿ ಕಾಂಗ್ರೆಸ್ ಶಾಸಕ ಯತೀಂದ್ರ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಬಸವಕಲ್ಯಾಣದಲ್ಲಿ ಕಾಂಗ್ರೆಸ್ ಗೆಲ್ಲುವ ಎಲ್ಲ ಅವಕಾಶವಿತ್ತು. ಆದರೆ ಜಾತ್ಯತೀತ ಮುಖವಾಡ ಧರಿಸಿರುವ ಕೋಮುವಾದಿಗಳ ರಾಜಕೀಯ ಕುತಂತ್ರದಿಂದ ಕಾಂಗ್ರೆಸ್ ಹಿನ್ನಡೆಯಾಗಿದೆ. ನಕಲಿ ಜಾತ್ಯತೀತರ ಬಗ್ಗೆ ಮುಂದೆ ಜಾಗೃತರಾಗಿರಬೇಕೆಂದು ಜೆಡಿಎಸ್ ಬಗ್ಗೆ ಪರೋಕ್ಷವಾಗಿ ಶಾಸಕ ಯತೀಂದ್ರ ಆಕ್ರೋಶ ಹೊರಹಾಕಿದ್ದಾರೆ.
ಮಸ್ಕಿ ವಿಧಾನಸಭೆ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಹೆಚ್ಚಿನ ಮತ ನೀಡಿ ಗೆಲುವಿಗೆ ಕಾರಣರಾದ ಮತದಾರರಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಹಾಗೂ ನಮ್ಮ ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸಿದ ಕಾರ್ಯಕರ್ತರಿಗೆ ಧನ್ಯವಾದಗಳು ಮತ್ತು ಜಯ ಗಳಿಸಿದ ಬಸನಗೌಡ ತುರವಿಹಾಳ ಅವರಿಗೆ ಅಭಿನಂದನೆಗಳು ಎಂದು ಟ್ವೀಟ್ ಮಾಡಿದ್ದಾರೆ.
ಬಸವಕಲ್ಯಾಣ ಉಪಚುನಾವಣೆಯಲ್ಲಿ ನಮ್ಮ ಪಕ್ಷಕ್ಕೆ ಮತನೀಡಿದ ಮತದಾರರಿಗೆ ಧನ್ಯವಾದಗಳು.ಈ ಉಪಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಗೆಲ್ಲುವಂತಹ ಎಲ್ಲ ಅವಕಾಶವಿತ್ತು,ಆದರೇ ಜಾತ್ಯಾತೀತ ಮುಖವಾಡಧರಿಸಿರುವ ಕೋಮುವಾದಿಗಳ ರಾಜಕೀಯ ಕುತಂತ್ರದಿಂದ ನಮ್ಮ ಪಕ್ಷಕ್ಕೆ ಹಿನ್ನಡೆಯಾಗಿದೆ.ಈ ರೀತಿಯ ನಕಲಿ ಜಾತ್ಯಾತೀತರ ಬಗ್ಗೆ ಮುಂದಿನ ದಿನಗಳಲ್ಲಿ ಜನತೆ ಜಾಗೃತರಾಗಬೇಕು.
— Dr Yathindra Siddaramaiah (@Dr_Yathindra_S) May 2, 2021
ಮಸ್ಕಿ ವಿಧಾನ ಸಭೆ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಹೆಚ್ಚಿನ ಮತ ನೀಡಿ ಗೆಲುವಿಗೆ ಕಾರಣರಾದ ಮತದಾರರಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಹಾಗೂ ನಮ್ಮ ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸಿದ ಕಾರ್ಯಕರ್ತರಿಗೆ ಧನ್ಯವಾದಗಳು ಮತ್ತು ಜಯಗಳಿಸಿದ ಬಸನಗೌಡ ತುರವೀಹಾಳ್ ಅವರಿಗೆ ಅಭಿನಂದನೆಗಳು.#maski
— Dr Yathindra Siddaramaiah (@Dr_Yathindra_S) May 2, 2021