Breaking News
Home / ರಾಜ್ಯ / ಕಿರುತೆರೆ ನಟ ಅನಿರುದ್ಧ್ ಆರೋಗ್ಯ ಸ್ಥಿತಿ ಗಂಭೀರ: ಶೀಘ್ರ ಚೇತರಿಕೆಗೆ ಹಾರೈಸಿ ಎಂದ ಪತ್ನಿ

ಕಿರುತೆರೆ ನಟ ಅನಿರುದ್ಧ್ ಆರೋಗ್ಯ ಸ್ಥಿತಿ ಗಂಭೀರ: ಶೀಘ್ರ ಚೇತರಿಕೆಗೆ ಹಾರೈಸಿ ಎಂದ ಪತ್ನಿ

Spread the love

ಹಿಂದಿ ಕಿರುತೆರೆಯ ಖ್ಯಾತ ನಟ ಅನಿರುದ್ಧ್ ದೇವ್ ಗೆ ಕೊರೊನಾ ಪಾಸಿಟಿವ್ ಬಂದ ಬೆನ್ನಲ್ಲೇ ಆರೋಗ್ಯದಲ್ಲಿ ತೀವ್ರ ಏರುಪೇರಾಗಿದೆ. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಪತಿ ಶೀಘ್ರ ಚೇತರಿಕೆ ಹಾರೈಸಿ ಎಂದು ಪತ್ನಿ ಶುಭಿ ಅಹುಜಾ ಸಾಮಾಜಿಕ ಜಾಲತಾಣದಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಪತಿ ಅನುರುದ್ಧ್ ಭೋಪಾಲ್ ಆಸ್ಪತ್ರೆಗೆ ಅನಿರುದ್ಧ ದಾಖಲಾಗಿದ್ದು, ತುಂಬಾ ಗಂಭೀರ ಸ್ಥಿತಿಯಲ್ಲಿದ್ದಾರೆಂದು ಅಹುಜಾ ಇನ್ ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ. ನಾನು ನನ್ನ 2 ತಿಂಗಳ ಮಗುವನ್ನು ಮನೆಯಲ್ಲೇ ಬಿಟ್ಟು ನಾನು ನನ್ನ ಗಂಡನನ್ನು ನೋಡಲು ಹೋಗುತ್ತಿದ್ದೀನಿ. ಇದು ನನ್ನ ದೊಡ್ಡ ಸವಾಲು ಎಂದು ಭಾವನಾತ್ಮಕವಾಗಿ ಬರೆದುಕೊಂಡಿದ್ದಾರೆ.

ಒಂದು ಕಡೆ ಆಸ್ಪತ್ರೆಯಲ್ಲಿ ಕೊರೊನಾದಿಂದ ಬಳಲುತ್ತಿರುವ ನನ್ನ ಪತ್ನಿಯ ಪಾಲಿನೆ ಮುಖ್ಯವಾದರೆ, ಇನ್ನೊಂದೆಡೆ 2 ತಿಂಗಳ ಮಗುವಿನ ಪೋಷಣೆಯನ್ನು ಮಾಡಬೇಕಿದೆ. ಇದು ನನ್ನ ಜೀವನದ ಅತಿ ದೊಡ್ಡ ಸವಾಲಿನ ಕೆಲಸವಾಗಿದೆ. ದಯವಿಟ್ಟು ನನ್ನ ಪತಿಯ ಆರೋಗ್ಯಕ್ಕಾಗಿ ಎಲ್ಲರೂ ಪ್ರಾರ್ಥಿಸಿ. ಈ ಸಮಯದಲ್ಲಿ ನನ್ನ ಪತಿಗೆ ಇದು ಮುಖ್ಯವಾಗಿದೆ.

‘ಅನಿರುದ್ಧ ಅವರನ್ನು ಇನ್ನು ಎರಡು ದಿನಗಳು ವೀಕ್ಷಣೆಯಲ್ಲಿಟ್ಟಿದ್ದಾರೆ. ದಯವಿಟ್ಟು ಎಲ್ಲರೂ ಪ್ರಾರ್ಥಿಸುತ್ತೀರಿ’ ಎಂದು ಹೇಳಿದ್ದಾರೆ. ಅನಿರುದ್ಧ್ ಬೇಗ ಗುಣಮುಖರಾಗಲಿ ಎಂದು ಕಿರುತೆರೆ ಕಲಾವಿದರು ಮತ್ತು ಅಭಿಮಾನಿಗಳು ಹಾರೈಸುತ್ತಿದ್ದಾರೆ.


Spread the love

About Laxminews 24x7

Check Also

ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

Spread the love ಬೆನಕಟ್ಟಿ: ಗ್ರಾಮಕ್ಕೆ ಆಗಮಿಸಿದ ಮಾಜಿ ಕೇಂದ್ರ ಸಚಿವ ದಿ. ಸುರೇಶ ಅಂಗಡಿ ಪುತ್ರಿ ಶ್ರದ್ಧಾ ಶೆಟ್ಟರ್ ಬಿಜೆಪಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ