Breaking News

ಸಂಗೀತ ನಿರ್ದೇಶಕ ಅರ್ಜುನ್‌ ಜನ್ಯ ಅಣ್ಣ ಕೋವಿಡ್‌ನಿಂದ ನಿಧನ

Spread the love

ಬೆಂಗಳೂರು: ಸಂಗೀತ ನಿರ್ದೇಶಕ ಅರ್ಜುನ್‌ ಜನ್ಯ ಅವರ ಅಣ್ಣ ಕಿರಣ್‌(44), ಕೋವಿಡ್‌-19ನಿಂದ ಮೃತಪಟ್ಟಿದ್ದಾರೆ.

ಈ ಕುರಿತು ಇನ್‌ಸ್ಟಾಗ್ರಾಂನಲ್ಲಿ ಮಾಹಿತಿ ಹಂಚಿಕೊಂಡಿರುವ ಅರ್ಜುನ್‌ ಜನ್ಯ, ‘ಅಣ್ಣ ಕೋವಿಡ್‌ನಿಂದ ಮೃತಪಟ್ಟಿದ್ದಾನೆ. ನೀನಿಲ್ಲದೆ ಇರುವ ನೋವನ್ನು ಹೇಗೆ ವ್ಯಕ್ತಪಡಿಸಬೇಕು ಎನ್ನುವುದು ತಿಳಿಯುತ್ತಿಲ್ಲ. ನನ್ನ ಕೊನೆಯ ಉಸಿರು ಇರುವವರೆಗೂ ನೀನು ನನ್ನ ಉಸಿರಲ್ಲಿರುವೆ’ ಎಂದು ಬರೆದಿದ್ದಾರೆ. ಅನಾರೋಗ್ಯದ ಕಾರಣ 15 ದಿನಗಳ ಹಿಂದೆ ಮಲ್ಯ ಆಸ್ಪತ್ರೆಗೆ ದಾಖಲಾಗಿದ್ದ ಕಿರಣ್‌ ಅವರು, ಭಾನುವಾರ ರಾತ್ರಿ ಮೃತಪಟ್ಟಿದ್ದರು.

ಕಳೆದ ತಿಂಗಳು ಅರ್ಜುನ್‌ ಜನ್ಯ ಅವರಿಗೆ ಕೋವಿಡ್‌ ದೃಢಪಟ್ಟಿತ್ತು. ಏ. 4ರಂದು ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೊಲೋ ಆಸ್ಪತ್ರೆಗೆ ಅವರು ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಏ. 10ರಂದು ಅವರು ಗುಣಮುಖರಾಗಿ ಮನೆಗೆ ತೆರಳಿ ಕ್ವಾರಂಟೈನ್‌ನಲ್ಲಿ ಇದ್ದರು. ಅರ್ಜುನ್‌ ಜನ್ಯ ಆಸ್ಪತ್ರೆಯಲ್ಲಿ ಇರುವ ಸಂದರ್ಭದಲ್ಲಿ ಅವರ ಆರೋಗ್ಯ ಸ್ಥಿತಿಯ ಕುರಿತು ಸಾಕಷ್ಟು ವದಂತಿಗಳು ಹರಡಿದ್ದವು. ಇದರಿಂದ ಬೇಸತ್ತಿದ್ದ ಅರ್ಜುನ್‌ ಜನ್ಯ, ಸೈಬರ್‌ ಪೊಲೀಸರಿಗೆ ದೂರು ನೀಡಿದ್ದರು.


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ