Breaking News

ಸಂಗೀತ ನಿರ್ದೇಶಕ ಅರ್ಜುನ್‌ ಜನ್ಯ ಅಣ್ಣ ಕೋವಿಡ್‌ನಿಂದ ನಿಧನ

Spread the love

ಬೆಂಗಳೂರು: ಸಂಗೀತ ನಿರ್ದೇಶಕ ಅರ್ಜುನ್‌ ಜನ್ಯ ಅವರ ಅಣ್ಣ ಕಿರಣ್‌(44), ಕೋವಿಡ್‌-19ನಿಂದ ಮೃತಪಟ್ಟಿದ್ದಾರೆ.

ಈ ಕುರಿತು ಇನ್‌ಸ್ಟಾಗ್ರಾಂನಲ್ಲಿ ಮಾಹಿತಿ ಹಂಚಿಕೊಂಡಿರುವ ಅರ್ಜುನ್‌ ಜನ್ಯ, ‘ಅಣ್ಣ ಕೋವಿಡ್‌ನಿಂದ ಮೃತಪಟ್ಟಿದ್ದಾನೆ. ನೀನಿಲ್ಲದೆ ಇರುವ ನೋವನ್ನು ಹೇಗೆ ವ್ಯಕ್ತಪಡಿಸಬೇಕು ಎನ್ನುವುದು ತಿಳಿಯುತ್ತಿಲ್ಲ. ನನ್ನ ಕೊನೆಯ ಉಸಿರು ಇರುವವರೆಗೂ ನೀನು ನನ್ನ ಉಸಿರಲ್ಲಿರುವೆ’ ಎಂದು ಬರೆದಿದ್ದಾರೆ. ಅನಾರೋಗ್ಯದ ಕಾರಣ 15 ದಿನಗಳ ಹಿಂದೆ ಮಲ್ಯ ಆಸ್ಪತ್ರೆಗೆ ದಾಖಲಾಗಿದ್ದ ಕಿರಣ್‌ ಅವರು, ಭಾನುವಾರ ರಾತ್ರಿ ಮೃತಪಟ್ಟಿದ್ದರು.

ಕಳೆದ ತಿಂಗಳು ಅರ್ಜುನ್‌ ಜನ್ಯ ಅವರಿಗೆ ಕೋವಿಡ್‌ ದೃಢಪಟ್ಟಿತ್ತು. ಏ. 4ರಂದು ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೊಲೋ ಆಸ್ಪತ್ರೆಗೆ ಅವರು ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಏ. 10ರಂದು ಅವರು ಗುಣಮುಖರಾಗಿ ಮನೆಗೆ ತೆರಳಿ ಕ್ವಾರಂಟೈನ್‌ನಲ್ಲಿ ಇದ್ದರು. ಅರ್ಜುನ್‌ ಜನ್ಯ ಆಸ್ಪತ್ರೆಯಲ್ಲಿ ಇರುವ ಸಂದರ್ಭದಲ್ಲಿ ಅವರ ಆರೋಗ್ಯ ಸ್ಥಿತಿಯ ಕುರಿತು ಸಾಕಷ್ಟು ವದಂತಿಗಳು ಹರಡಿದ್ದವು. ಇದರಿಂದ ಬೇಸತ್ತಿದ್ದ ಅರ್ಜುನ್‌ ಜನ್ಯ, ಸೈಬರ್‌ ಪೊಲೀಸರಿಗೆ ದೂರು ನೀಡಿದ್ದರು.


Spread the love

About Laxminews 24x7

Check Also

ಸರಕು ಸಾಗಣೆ, ಜನರ ಪ್ರಯಾಣ: ನವೆಂಬರ್​​ ತಿಂಗಳ ಆದಾಯದಲ್ಲಿ ನೈಋತ್ಯ ರೈಲ್ವೆ ಹೊಸ ದಾಖಲೆ

Spread the love ಹುಬ್ಬಳ್ಳಿ: ನೈಋತ್ಯ ರೈಲ್ವೆಯು ನವೆಂಬರ್ 2025ರಲ್ಲಿ ಸರಕು ಸಾಗಣೆ ಮತ್ತು ಆದಾಯದಲ್ಲಿ ಗಮನಾರ್ಹ ಬೆಳವಣಿಗೆಯನ್ನು ಸಾಧಿಸಿ, ಪ್ರಮುಖ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ