Breaking News

ರೆಮ್‍ಡಿಸಿವಿರ್ ಇಂಜೆಕ್ಷನ್ ಅನ್ನು ಕದ್ದು ಮಾರುತ್ತಿದ್ದ 10 ಜನ ಗ್ಯಾಂಗ್ ಅನ್ನು ಬಾಗಲಕೋಟೆ ಸಿಇಎನ್ ಪೊಲೀಸರು ಬೇಟೆಯಾಡಿದ್ದಾರೆ.

Spread the love

ಬಾಗಲಕೋಟೆ: ಜಿಲ್ಲೆಯಲ್ಲಿ ಕದ್ದು ಮುಚ್ಚಿ ರೆಮ್‍ಡಿಸಿವಿರ್ ಇಂಜೆಕ್ಷನ್ ಅನ್ನು ಕದ್ದು ಮಾರುತ್ತಿದ್ದ 10 ಜನ ಗ್ಯಾಂಗ್ ಅನ್ನು ಬಾಗಲಕೋಟೆ ಸಿಇಎನ್ ಪೊಲೀಸರು ಬೇಟೆಯಾಡಿದ್ದಾರೆ.

ಆಸ್ಪತ್ರೆ ಸಿಬ್ಬಂದಿಯೇ ಈ ಕಳ್ಳರಾಗಿರೋದು ಬೆಳಕಿಗೆ ಬಂದಿದೆ. 10 ಜನರಲ್ಲಿ ಮೂವರು ಕೋವಿಡ್ ಆಸ್ಪತ್ರೆ ಸಿಬ್ಬಂದಿ, 7 ಜನ ಖಾಸಗಿ ಆಸ್ಪತ್ರೆ ಸಿಬ್ಬಂದಿ ಆಗಿದ್ದಾರೆ. ರೋಗಿಗಳಿಗೆ ಕೊಡುವ ಇಂಜೆಕ್ಷನ್ ಅನ್ನು ಹೊರತಂದು ಬ್ಲಾಕ್‍ನಲ್ಲಿ 25-30 ಸಾವಿರಕ್ಕೆ ಮಾರಾಟ ಮಾಡುತ್ತಿದ್ದ ವೇಳೆ ಬಲೆಗೆ ಬಿದ್ದಿದ್ದಾರೆ.

ಇತ್ತ, ತುಮಕೂರಿನಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತ ಸೈಯದ್ ಮತ್ತು ರಖೀಬ್ ಅನ್ನೋವ್ರು ಸಿದ್ದಗಂಗಾ ಆಸ್ಪತ್ರೆಯ ಸಿಬ್ಬಂದಿಯಾಗಿದ್ದಾರೆ. ಈ ಮಧ್ಯೆ ಹಾಸನ ಜಿಲ್ಲೆಯಲ್ಲಿ ಹಳ್ಳಿ ಹಳ್ಳಿಯಲ್ಲೂ ಕೊರೊನಾ ಸಾವಾಗ್ತಿದೆ. ಆದರೆ ಸರ್ಕಾರದ ಡೇಟಾ ಏನೇನೂ ಅಲ್ಲ ಅಂತ ಮಾಜಿ ಸಚಿವ ರೇವಣ್ಣ ಕಿಡಿಕಾರಿದ್ದಾರೆ.

ಅಲ್ಲದೆ ಜಿಲ್ಲೆಯಲ್ಲಿ ರೆಮ್‍ಡಿಸಿವಿರ್ ಔಷಧಿ ಸಿಗ್ತಿಲ್ಲ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿಗಳ ಜೊತೆ ಮಾತನಾಡಿದ್ದೇನೆ. ಆರೋಗ್ಯ ಸಚಿವರೂ ಹಾಸನಕ್ಕೆ ಭೇಟಿ ನೀಡೋದಾಗಿ ಹೇಳಿದ್ದಾರೆ ಅಂತ ರೇವಣ್ಣ ಹೇಳಿದ್ದಾರೆ.


Spread the love

About Laxminews 24x7

Check Also

ಚಾಮುಂಡೇಶ್ವರಿ ಸಂಜೀವಿನಿ ಮಹಿಳಾ ಸಂಘಟನೆಯ ಕಾರ್ಯಕ್ಕೆ ಒಲಿದು ಬಂತು ರಾಷ್ಟ್ರಮಟ್ಟದ ಪ್ರಶಸ್ತಿ

Spread the love ಬಾಗಲಕೋಟೆ: ಮಹಿಳೆಯರು ಮನಸ್ಸು ಮಾಡಿದರೆ ಏನನ್ನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ಮಹಿಳಾ ಸಂಘಟನೆಯೊಂದು ಸಾಕ್ಷಿಯಾಗಿದೆ. ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ