Breaking News

ಕೋವಿಡ್-19: ಬೆಂಗಳೂರು ಪೊಲೀಸರ ಜಾಗೃತಿ ವಿಡಿಯೊ

Spread the love

ಬೆಂಗಳೂರು: ಕೊರೊನಾ‌ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಈ ಬಗ್ಗೆ ಜನರು ಜಾಗೃತಿಯಿಂದ ಇರಬೇಕು ಎಂದು ಕೋರಿ ನಗರ ಕಮಿಷನರೇಟ್ ವತಿಯಿಂದ ವಿಡಿಯೊ ಬಿಡುಗಡೆ ಮಾಡಲಾಗಿದೆ.

‘ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಅಂತರ ಕಾಯ್ದುಕೊಳ್ಳಬೇಕು, ಸರ್ಕಾರ ರೂಪಿಸಿರುವ‌ ಎಲ್ಲ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು’ ಎಂದು ಕಮಿಷನರ್ ಕಮಲ್ ಪಂತ್ ಕೋರಿದ್ದಾರೆ.

ಕಾನ್‌ಸ್ಟೆಬಲ್‌ನಿಂದ ಹಿಡಿದು ಕಮಿಷನರ್‌ವರೆಗೂ ಎಲ್ಲರೂ ವಿಡಿಯೊದಲ್ಲಿ ಜಾಗೃತಿ ಮಾತುಗಳನ್ನಾಡಿದ್ದಾರೆ.

ಹೆಚ್ಚುವರಿ ಪೊಲೀಸ್ ಕಮಿಷನರ್‌ಗಳಾದ ಸೌಮೆಂದು ಮುಖರ್ಜಿ, ಮುರುಗನ್, ಜಂಟಿ‌ ಕಮಿಷನರ್‌ಗಳಾದ ಸಂದೀಪ್ ಪಾಟೀಲ, ಬಿ.ಆರ್. ರವಿಕಾಂತೇಗೌಡ ಹಾಗೂ ಹಲವರು ವಿಡಿಯೊದಲ್ಲಿದ್ದಾರೆ.

ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್‌, ಯೂಟ್ಯೂಬ್, ಟ್ವಿಟರ್‌ನಲ್ಲಿ ವಿಡಿಯೊ ಅಪ್‌ಲೋಡ್ ಮಾಡಲಾಗಿದೆ.


Spread the love

About Laxminews 24x7

Check Also

ಪ್ರತಿ ಟನ್ ಕಬ್ಬಿಗೆ​​ ಹೆಚ್ಚುವರಿ 50 ರೂ. ಕೊಡಲು ಸಾಧ್ಯವಿಲ್ಲ: ಸಕ್ಕರೆ ಮಿಲ್ಸ್ ಸಂಘಟನೆ ಅಧ್ಯಕ್ಷ

Spread the loveಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3,200 ರೂ.‌ ಕೊಡಲು ಮಾತ್ರ ಸಾಧ್ಯ. 3,250 ರೂ. ಕೊಡುವುದು ಸಾಧ್ಯವಿಲ್ಲ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ