Breaking News
Home / ರಾಜ್ಯ / ಕೇರಳದಲ್ಲಿ ಮೇ16ರವರೆಗೆ ಲಾಕ್‌ಡೌನ್ : ಸಿಎಂ ಪಿಣರಾಯಿ ವಿಜಯನ್

ಕೇರಳದಲ್ಲಿ ಮೇ16ರವರೆಗೆ ಲಾಕ್‌ಡೌನ್ : ಸಿಎಂ ಪಿಣರಾಯಿ ವಿಜಯನ್

Spread the love

ತಿರುವನಂತಪುರ: ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ದೇವರನಾಡು ಕೇರಳದಲ್ಲಿ ಇದೀಗ ಲಾಕ್ ಡೌನ್ ‍ಘೋಷಣೆಯಾಗಿದೆ.

ಮೇ 8ರ ಬೆಳಗ್ಗೆ 6 ಗಂಟೆಯಿಂದ ಮೇ16ರವರೆಗೆ ಕೇರಳ ರಾಜ್ಯದಲ್ಲಿ ಲಾಕ್‌ಡೌನ್ ಜಾರಿ ಮಾಡುತ್ತಿರುವುದಾಗಿ ಸಿಎಂ ಪಿಣರಾಯಿ ವಿಜಯನ್ ಹೇಳಿದ್ದಾರೆ.

ಸರ್ಕಾರದ ಈ ನಿರ್ಧಾರಕ್ಕೆ ಬುಧವಾರ ಕೇರಳದಲ್ಲಿ 41,953 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿರುವುದೇ ಕಾರಣವಾಗಿದೆ. ಇದು ಇದುವರೆಗಿನ ದೈನಂದಿನ ದಾಖಲೆಯಾಗಿದೆ. ಲಾಕ್‌ಡೌನ್ ವೇಳೆ ಯಾವುದಕ್ಕೆಲ್ಲ ವಿನಾಯತಿ ಇರಲಿದೆ ಎಂಬುದು ಮಾರ್ಗಸೂಚಿಯಲ್ಲಿ ತಿಳಿದು ಬರಲಿದೆ.

ಕಳೆದ ವರ್ಷ ಕೇರಳದಲ್ಲಿಯೇ ಮೊದಲ ಕೋವಿಡ್ ಪ್ರಕರಣ ಪತ್ತೆಯಾಗಿತ್ತು. ಆದರೆ, ನಂತರದ ದಿನಗಳಲ್ಲಿ ಸರ್ಕಾರದ ಕಟ್ಟುನಿಟ್ಟಿನ ಕ್ರಮಗಳ ಫಲವಾಗಿ ಸೋಂಕು ಹತೋಟಿಗೆ ಬಂದಿತ್ತು. ಈ ಬಾರಿಯೂ ಎರಡನೇ ಅಲೆ ಕೇರಳದಲ್ಲಿ ಹೆಚ್ಚಿದೆ. ಹೀಗಾಗಿ ಲಾಕ್ ಡೌನ್ ಘೋಷಣೆ ಮಾಡಲು ಸರ್ಕಾರದ ನಿರ್ಧರಿಸಿದೆ. ಇದರ ಜೊತೆಗೆ ಲಸಿಕಾ ಅಭಿಯಾನವನ್ನೂ ಚುರುಕುಗೊಳಿಸಿದೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ