ಬೀದರ್: ಖಾಸಗಿ ಆಸ್ಪತ್ರೆಯಲ್ಲಿ ಸರಿಯಾದ ಸಮಯಕ್ಕೆ ಆಕ್ಸಿಜನ್ ಸಿಗದೆ ಓರ್ವ ವ್ಯಕ್ತಿ ಸಾವನ್ನಪ್ಪಿದ ಘಟನೆ ಬೀದರ್ ನಲ್ಲಿ ನಡೆದಿದೆ.
ಅಬ್ದುಲ್ ಮನ್ನಾನ್ ಸೇಠ್(63) ಆಕ್ಸಿಜನ ಸಿಗದೆ ಇಂದು ಸಾವನ್ನಪ್ಪಿದ್ದಾರೆ. ಬೀದರ್ ನಗರದ ಓಲ್ಡ್ ಸಿಟಿಯಲ್ಲಿರುವ ಬಿಬಿಎಸ್ ಆಸ್ಪತ್ರೆಯಲ್ಲಿ ತಡರಾತ್ರಿ ಆಕ್ಸಿಜನ್ ಮುಗಿದರು ಖಾಸಗಿ ಆಸ್ಪತ್ರೆಯ ಆಡಳಿತ ಮಂಡಳಿಯ ಮಹಾ ನಿರ್ಲಕ್ಷ್ಯದಿಂದಾಗಿ ಈ ಅವಘಡ ಸಂಭವಿಸಿದೆ.

ವಿಷಯ ತಿಳಿದು ಸ್ಥಳಕ್ಕೆ ಬಂದ ನಗರ ಠಾಣೆಯ ಪೊಲೀಸರು ಆಕ್ಸಿಜನ್ ವ್ಯವಸ್ಥೆಮಾಡಿ 13 ಜನರ ಪ್ರಾಣ ಉಳಿದಿದ್ದು ಪೊಲೀಸರ ಸಮಯ ಪ್ರಜ್ಞೆಯಿಂದಾಗಿ 13 ಜನರು ಪ್ರಾಣಾಪಾಯದಿಂದ ಪಾರಾಗಿದ್ದರೆ. ಆದರೆ ಅಬ್ದುಲ್ ಮನ್ನಾನ್ಗೆ ಕೊರೊನಾ ಸೋಂಕು ಇಲ್ಲದೆ ಇದ್ದರೂ ಆಕ್ಸಿಜನ್ ಸಿಗದೆ ಉಸಿರಾಟದ ತೀವ್ರ ಸಮಸ್ಯೆಯಾಗಿ ಬ್ರೀಮ್ಸ್ಗೆ ದಾಖಲಾಗಿದ್ದರು, ಇಂದು ಸಾವನ್ನಪ್ಪಿದ್ದಾರೆ.

ಆಕ್ಸಿಜನ್ ಸಮಸ್ಯೆಯೇ ನನ್ನ ಸಹೋದರನ ಸಾವಿಗೆ ಕಾರಣ ಎಂದು ಆಕ್ಸಿಜನ್ ಸಮಸ್ಯೆಯಿಂದಾಗಿ ಸಾವನ್ನಪ್ಪಿದ ವ್ಯಕ್ತಿಯ ಕುಟುಂಬಸ್ಥರು ಖಾಸಗಿ ಆಸ್ಪತ್ರೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೀದರ್ನಲ್ಲಿ ಆಕ್ಸಿಜನ್ ಸಮಸ್ಯೆ ಎದುರಾಗುತ್ತಿದ್ದು ಜಿಲ್ಲಾಡಳಿತ ಇಗಲೇ ಎಚ್ಚರಗೊಳ್ಳಬೇಕಿದೆ. ಇಲ್ಲವಾದರೆ ಚಾಮರಾಜನಗರದ ಪರಿಸ್ಥಿತಿ ಗಡಿ ಜಿಲ್ಲೆಯಲ್ಲಿ ಸಂಭವಿಸಿದರೂ ಆಶ್ಚರ್ಯವಿಲ್ಲಾ ಎನ್ನುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
Laxmi News 24×7